Don't Miss!
- News ಹಿಂದೂ ಯುವತಿ ಬರ್ಬರ ಹತ್ಯೆ ಪ್ರಕರಣ; ಇದೊಂದು ಲಬ್ ಜಿಹಾದ್ ಎಂದ ಜೋಶಿ: ಸಿದ್ದರಾಮಯ್ಯ ಹೇಳಿದ್ದೇನು?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುಕುಳ ಕೇಸು ದಾಖಲಿಸಿದ ನಟಿ ನವನೀತ್ ಕೌರ್
ಕನ್ನಡದ 'ದರ್ಶನ್' ಚಿತ್ರದ ಮೂಲಕ ಬೆಳ್ಳಿತೆರೆಗೆ ಅಡಿಯಿಟ್ಟ ನಟಿ ನವನೀತ್ ಕೌರ್ ಅವರು ಈ ಬಾರಿಯ ಲೋಕಸಭಾ ಚುನಾವನಾ ಅಖಾಡಕ್ಕೆ ಇಳಿಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಅವರು ಶಿವಸೇನಾ ಲೋಕಸಭಾ ಸಂಸದ ಆನಂದರಾವ್ ಅಡಸೂಲ್ ಹಾಗೂ ಇನ್ನಿಬ್ಬರ ವಿರುದ್ಧ ಪೊಲೀಸ್ ಕೇಸ್ ದಾಖಲಿಸಿದ್ದಾರೆ.
ಕಳೆದ ಎರಡು ತಿಂಗಳಿಂದ ತನ್ನ ವಿರುದ್ಧ ಇರುವ ಹರಿಹಾಯುತ್ತಿದ್ದು, ಅಸಭ್ಯ ಪದಜಾಲವನ್ನು ಬಳಕೆ ಮಾಡಿದ್ದಾರೆ. ಇದಿಷ್ಟೇ ಅಲ್ಲದೆ ಬೆದರಿಕೆ ಕರೆಗಳನ್ನೂ ಮಾಡಿದ್ದಾರೆ ಎಂದು ನವನೀತ್ ಕೌರ್ ದೂರಿನಲ್ಲಿ ತಿಳಿಸಿದ್ದಾರೆ. [ಮಹಾರಾಷ್ಟ್ರ ಶಾಸಕನ ಜೊತೆ ನವನೀತ್ ಕೌರ್ ಮದುವೆ]
ಆದರೆ ಈ ಆರೋಪಗಳನ್ನು 67 ವರ್ಷಗಳ ಆನಂದರಾವ್ ಅವರು ಸರಾಸಗಟಾಗಿ ತಳ್ಳಿಹಾಕಿದ್ದಾರೆ. ನವನೀತ್ ಅವರು ಮಾಡಿರುವ ಆರೋಪಗಳು ನಿರಾಧಾರವಾಗಿವೆ. ಅವರು ಸಾರ್ವಜನಿಕ ಅನುಕಂಪ ಗಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ಸಾರ್ವಜನಿಕ ನೀತಿ ನಿಯಮಗಳು ಗೊತ್ತಿಲ್ಲ. ನನ್ನ ವಿರುದ್ಧ ಇಲ್ಲಸಲ್ಲಸದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.
ನವನೀತ್ ಕೌರ್ (27) ಅವರು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುತ್ತಿದ್ದು ಆನಂದರಾವ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಸ್ಪರ್ಧಿಸದಂತೆ ಆನಂದರಾವ್ ತಮಗೆ ಬೆದರಿಕೆ ಒಡ್ಡುತ್ತಿದ್ದಾರೆ. ಒಂದು ವೇಳೆ ನಾಮಿನೇಷನ್ ಪತ್ರ ಸಲ್ಲಿಸಿದರೆ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾಗಿ ನವನೀತ್ ಕೌರ್ ಆರೋಪಿಸಿದ್ದಾರೆ. (ಏಜೆನ್ಸೀಸ್)