Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹೆಣ್ಣೆಂದರೆ ಕೇವಲ ಕಾಮತೃಷೆ ತೀರಿಸುವ ವಸ್ತು'
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮೈಂಡ್ ಸೆಟ್ ಹೇಗಿರುತ್ತದೋ, ಮಹಿಳೆಯರ ಬಗೆಗಿನ ಅವರ ಅಭಿಪ್ರಾಯ, ಸಮಾಜದ ಬಗ್ಗೆ ಅವರ ಧೋರಣೆ ಎಂಥಹದ್ದು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ವರ್ಮಾ ಅವರ ಮನೋಭಾವಕ್ಕೆ ಕನ್ನಡಿ ಹಿಡಿಯುವ ಅವರ ಪುಸ್ತಕ 'ನಾ ಇಷ್ಟಂ' (ನನ್ನಿಷ್ಟ) ಓದಿದರೆ ಇದು ಮನದಟ್ಟಾಗುತ್ತದೆ.
ಈಗ ವರ್ಮಾಗೆ ಸಂಬಂಧಿಸಿದಂತೆ ತಾಜಾ ಸುದ್ದಿಯೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ...ಇದುವರೆಗೂ ವರ್ಮಾ ಬಗ್ಗೆ ಗೊತ್ತಿಲ್ಲದ ಸಂಗತಿಯೊಂದು ಬಹಿರಂಗವಾಗಿದೆ. ಬಾಲಿವುಡ್ ನ ಖ್ಯಾತ ನಿರ್ದೇಶಕ ಶೇಖರ್ ಕಪೂರ್ ಅವರ ಮಾಜಿ ಪತ್ನಿ, ಗಾಯಕಿ, ನಟಿ ಸುಚಿತ್ರಾ ಕೃಷ್ಣಮೂರ್ತಿ (38) ತನ್ನ ಜೀವನದಲ್ಲಿ ನಡೆದಂತಹ ಘಟನೆಗಳನ್ನು 'ಡ್ರಾಮಾ ಕ್ವೀನ್' ಎಂಬ ಪುಸ್ತಕಸಲ್ಲಿ ಬಹಿರಂಗಪಡಿಸಿದ್ದಾರೆ.
ತಮ್ಮನ್ನು ಮದುವೆಯಾಗುತ್ತೀರಾ ಎಂದು ವರ್ಮಾ ಸಾಹೇಬರಿಗೆ ಎಸ್ಎಂಎಸ್ ಸಂದೇಶ ಕಳುಹಿಸಿದ್ದರಂತೆ. ಇದಕ್ಕೆ ಪ್ರತಿಕ್ರಿಯಿಸಿದ ವರ್ಮಾ, ಮದುವೆಯಲ್ಲಿ ನನಗೆ ನಂಬಿಕೆ ಇಲ್ಲ. ನಮ್ಮಿಬ್ಬರ ಮನೋಭಾವ ಒಂದೇ ರೀತಿ ಇಲ್ಲ. ನಮ್ಮಿಬ್ಬರ ಮದುವೆ ಎಂದೆಂದಿಗೂ ಸಾಧ್ಯವಿಲ್ಲ...
"ನಾನು ಹೆಣ್ಣನ್ನು ಕೇವಲ ಕಾಮತೃಷೆಗಾಗಿ ಬಳಸುತ್ತೇನೆ. ಆದರೆ ನೀವು ಅದನ್ನು ನನ್ನಿಂದ ಬಯಸುತ್ತಿಲ್ಲ ಎಂದುಕೊಂಡಿದ್ದೇನೆ. ನಾನು ಮಹಿಳೆಯರ ದೇಹವನ್ನು ಇಷ್ಟಪಡುತ್ತೇನೆ. ಮೆದುಳನ್ನಲ್ಲ. ಮಹಿಳೆಯರನ್ನು ನೋಡಬೇಕೆ ಹೊರತು ಅವರನ್ನು ಕೇಳಿಸಿಕೊಳ್ಳಬಾರದು" ಎಂದು ತಮಗೆ ಸಂದೇಶ ಕಳುಹಿಸಿದ್ದಾಗಿ ಸುಚಿತ್ರಾ ಹೇಳಿಕೊಂಡಿದ್ದಾರೆ. ವರ್ಮಾ ಅವರು ಹೀಗೆಂದಿರುವುದು ಭಾರಿ ಚರ್ಚೆಗೆ ಹಾಗೂ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.