Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೀರೇಶ್ ಚಿತ್ರಮಂದಿರದಿಂದ 'ಮೈಲಾರಿ' ಎತ್ತಂಗಡಿ
ಚಿತ್ರವೊಂದು ಯಶಸ್ವಿ ಪ್ರದರ್ಶನ ಕಾಣುತ್ತಿದ್ದಾಗಲೆ ಅದನ್ನು ಎತ್ತಂಗಡಿ ಮಾಡುವುದು ಗಾಂಧಿನಗರಕ್ಕೇನು ಹೊಸದಲ್ಲ. ಈಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 'ಮೈಲಾರಿ' ಚಿತ್ರಕ್ಕೂ ಇದೇ ಗತಿಯಾಗಿದೆ. 'ಮೈಲಾರಿ' ಯಶಸ್ವಿ ಪ್ರದರ್ಶನ ಕಾಣುತ್ತಿದ್ದರೂ ವೀರೇಶ್ ಚಿತ್ರಮಂದಿರದಿಂದ ಎತ್ತಂಗಡಿ ಮಾಡಲಾಗಿದೆ ಎಂದು ಚಿತ್ರದ ನಿರ್ಮಾಪಕರು ಗರಂ ಆಗಿದ್ದಾರೆ.
ರಮೇಶ್ ಯಾದವ್ ನಿರ್ಮಾಣದ 'ಬಾಸ್' ಚಿತ್ರ ಜನವರಿ 14ರಂದು ತೆರೆಗೆ ಅಪ್ಪಳಿದ್ದು, ಇದೇ ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ 'ಮೈಲಾರಿ' ಚಿತ್ರಕ್ಕೆ ಕೊಕ್ ನೀಡಲಾಗಿದೆ. ಈ ಸಂಬಂಧ 'ಮೈಲಾರಿ' ನಿರ್ಮಾಪಕರು ವೀರೇಶ್ ಚಿತ್ರಮಂದಿರದ ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದಿದ್ದಾರೆ.
'ಮೈಲಾರಿ'ಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಎಂದು ಶಿವಣ್ಣನ ಅಭಿಮಾನಿಗಳು ರೇಸ್ ಕೋರ್ಸ್ ರಸ್ತೆಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟಿಸಿದರು. ಪತ್ರಕರ್ತ ಅಗ್ನಿ ಶ್ರೀಧರ್ ಹಾಗೂ ನಿರ್ಮಾಪಕ ರವೀಂದ್ರಅವರು 'ಮೈಲಾರಿ' ಚಿತ್ರದ ನಿರ್ಮಾಪಕ ಕೆ ಪಿ ಶ್ರೀಕಾಂತ್ ಅವರಿಗೆ ಸಾಥ್ ನೀಡಿದರು.
ಈ ಸಂಬಂಧ ಫಿಲಂ ಚೇಂಬರ್ ಏನು ಕ್ರಮಕೈಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ. ದರ್ಶನ್ ಮುಖ್ಯಭೂಮಿಕೆಯಲ್ಲಿರುವ 'ಬಾಸ್' ಚಿತ್ರಕ್ಕೆ ಬೆಳಗಿನ ಪ್ರದರ್ಶನ ಹಾಗೂ 'ಮೈಲಾರಿ'ಗೆ ಉಳಿದ ಪ್ರದರ್ಶನಗಳನ್ನು ನೀಡುವ ರಾಜಿ ಸೂತ್ರವನ್ನು ಇಬ್ಬರೂ ನಿರ್ಮಾಪಕರ ಮುಂದಿಡಲಾಗಿದೆ ಎನ್ನಲಾಗಿದೆ. [ಹ್ಯಾಟ್ರಿಕ್ ಹೀರೋ]