Don't Miss!
- News Lok Sabha Election: ಚಾಮರಾಜನಗರ ಕ್ಷೇತ್ರ ಸಿಎಂಗೆ ಪ್ರತಿಷ್ಠೆಯ ಕಣ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮದುವೆ ಬಗ್ಗೆ ಮೌನ ಮುರಿದ ನಟಿ ಅನುಷ್ಕಾ ಶೆಟ್ಟಿ
ಬೆಂಗಳೂರು ಸಂಪಿಗೆ ಅನುಷ್ಕಾ ಶೆಟ್ಟಿ ಅವರ ಮದುವೆ ಬಗ್ಗೆ ಆಗಾಗ ಸುದ್ದಿಗಳು ಬರುತ್ತಲೇ ಇವೆ. ಆದರೆ ಇವೆಲ್ಲವೂ ಗಾಳಿಸುದ್ದಿಗಳಾಗಿಯೇ ಉಳಿದವು. ಇನ್ನೇನು ಅಕ್ಕಿನೇನಿ ನಾಗಾರ್ಜುನ ಪುತ್ರ ನಾಗಚೈತನ್ಯ ಜೊತೆ ಮದುವೆ ನಡೆದೇ ಹೋಯಿತು ಎಂಬ ಸುದ್ದಿ ಸ್ಫೋಟಗೊಂಡಿತ್ತು.
ತನ್ನ ಮದುವೆ ಬಗ್ಗೆ ಬಂದಂತಹ ವದಂತಿಗಳಿಗೆ ಅನುಷ್ಕಾ ತೆರೆ ಎಳೆದರು. ಈಗ ಸ್ವತಃ ತನ್ನ ಮದುವೆ ಬಗ್ಗೆ ಮೌನ ಮುರಿದಿದ್ದಾರೆ. "ನಾನು ಚಿತ್ರೋದ್ಯಮಕ್ಕೆ ಅಡಿಯಿಟ್ಟಂದಿನಿಂದಲೂ ನನ್ನ ಮದುವೆ ಬಗ್ಗೆ ಇಲ್ಲಸಲ್ಲದ ಸುದ್ದಿಗಳು ಹಬ್ಬುತ್ತಿವೆ. ಆದರೆ ನಾನು ಇದುವರೆಗೂ ಸೂಕ್ತ ಹುಡುಗನನ್ನು ಆಯ್ಕೆ ಮಾಡಿಕೊಂಡಿಲ್ಲ...
ನೀವು ಕೈಹಿಡಿಯುವ ಹುಡುಗ ಹೇಗಿರಬೇಕೆಂದು ಬಯಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅನುಷ್ಕಾ, "ನನಗಿಂತಲೂ ಎತ್ತರವಾಗಿರಬೇಕು. ನನಗಿಂತಲೂ ಸುಂದರವಾಗಿರಬೇಕು ಎಂಬ ಕೋರಿಕೆಗಳಿಲ್ಲ. ಯಾಕೆಂದರೆ ಈಗಲೇ ನನಗೆ ಮದುವೆಯಾಗಬೇಕೆಂದಿಲ್ಲ" ಎಂದಿದ್ದಾರೆ.
ಸದ್ಯಕ್ಕೆ ಅನುಷ್ಕಾ ಶೆಟ್ಟಿ ಅವರು ಎಸ್ಎಸ್ ರಾಜಮೌಳಿ ಅವರ 'ಬಾಹುಬಲಿ' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದರ ಜೊತೆಗೆ 'ರುದ್ರಮದೇವಿ' ಎಂಬ ಭಾರಿ ಜಜೆಟ್ ಚಿತ್ರಗಳಲ್ಲೂ ಅಭಿನಯಿಸುತ್ತಿದ್ದಾರೆ. ಸೂಕ್ತ ಪಾತ್ರ ಸಿಕ್ಕಿದರೆ ಕನ್ನಡ ಚಿತ್ರಗಳಲ್ಲೂ ಬಣ್ಣ ಹಚ್ಚಲು ರೆಡಿ ಎಂದಿದ್ದಾರೆ.