Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಜಧಾನಿ' ಎಕ್ಸ್ಪ್ರೆಸ್ನಂತೆ ಮುನ್ನುಗ್ಗಲಿ: ಗೃಹಸಚಿವ
ಕೇರಳದಂತಹ ಸಣ್ಣ ರಾಜ್ಯದಲ್ಲಿ ಪ್ರತಿವರ್ಷ ಅತ್ಯುತ್ತಮ ಚಿತ್ರಗಳನ್ನು ನಿರ್ಮಿಸಲಾಗುತ್ತಿದೆ. ನಮ್ಮಲ್ಲೂ ಆ ರೀತಿಯ ಚಿತ್ರಗಳನ್ನು ನಿರ್ಮಿಸಬೇಕಾಗಿದೆ ಎಂದು ಗೃಹಸಚಿವ ಆರ್ ಅಶೋಕ್ ಅಭಿಪ್ರಾಯಪಟ್ಟರು. ಅವರು 'ರಾಜಧಾನಿ' ಚಿತ್ರದ ಧ್ವನಿಸುರುಳಿ ಸಮಾರಂಭದಲ್ಲಿ ಮಾತನಾಡುತ್ತ್ತಿದ್ದರು. ರಾಜಧಾನಿ ಎಕ್ಸ್ಪ್ರೆಸ್ನಂತೆ ಚಿತ್ರ ಮುನ್ನುಗ್ಗಲಿ ಎಂದು ಅಶೋಕ್ ಚಿತ್ರತಂಡವನ್ನು ಹಾರೈಸಿದರು.
ಕನ್ನಡ ಚಿತ್ರಗಳು ಇನ್ನೂ ಹೆಚ್ಚಿನ ಗುಣಮಟ್ಟದೊಂದಿಗೆ ನಿರ್ಮಾಣವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲಿ ಎಂಬುದು ಆರ್ ಅಶೋಕ್ ಅವರ ಮಾತುಗಳಲ್ಲಿ ವ್ಯಕ್ತವಾಗುತ್ತಿತ್ತು. ಚಿತ್ರದ ನಾಯಕ ನಟ ಯಶ್ ಮಾತನಾಡುತ್ತಾ, ಅರ್ಜುನ್ ಸಂಗೀತ ಸಂಯೋಜಿಸಿರುವ ಹಾಡುಗಳು ಕುಣಿದು ಕುಪ್ಪಳಿಸುವಂತಿವೆ. ಎಚ್ ಸಿ ವೇಣು ಅವರ ಛಾಯಾಗ್ರಹಣವೂ ಅದ್ಭುತವಾಗಿ ಮೂಡಿಬಂದಿದೆ ಎಂದರು.
ಈ ಚಿತ್ರದಲ್ಲಿ ಯಶ್ ಡ್ಯೂಪ್ ಕಲಾವಿದರನ್ನು ಬಳದೆ ಸ್ವತಃ ತಾವೇ ಸಾಹಸ ಸನ್ನಿವೇಶವನ್ನು ಮಾಡಿದ್ದಾರೆ. 24 ಅಂತಸ್ತಿನ ಮಹಡಿ ಮೇಲಿಂದ ಧುಮುಕುವ ಸನ್ನಿವೇಶವನ್ನು ಯಶ್ ಮಾಡಿರುವುದು ವಿಶೇಷ. ಈ ಬಗ್ಗೆ ಸಮಾರಂಭದಲ್ಲಿದ್ದ ಸುದೀಪ್ ಮಾತನಾಡುತ್ತಾ, ಈ ರೀತಿಯ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎಂದು ಯಶ್ಗೆ ಕಿವಿ ಮಾತು ಹೇಳಿದರು.
'ರಾಜಧಾನಿ' ಚಿತ್ರವನ್ನು ಕೆ ವಿ ರಾಜು ನಿರ್ದೇಶಿಸಿದ್ದು ಸೌಮ್ಯ ಸತ್ಯನ್ ನಿರ್ಮಿಸಿದ್ದಾರೆ. ಚಿತ್ರದ ನಾಯಕಿ ಶೀನಾ. ಈ ಚಿತ್ರವನ್ನು ಬೆಂಗಳೂರು, ಕೇರಳ, ಗೋವಾದಲ್ಲಿ ಚಿತ್ರೀಕರಿಸಲಾಗಿದೆ. 'ರಾಜಧಾನಿ' ಚಿತ್ರದ ಬಹುತೇಕ ಹಾಡುಗಳು ಕೇರಳ ಹಾಗೂ ಗೊವಾದ ಸುಂದರ ತಾಣಗಳಲ್ಲಿ ಚಿತ್ರೀಕರಿಸಿರುವುದು ವಿಶೇಷ.