Don't Miss!
- Automobiles 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಣಿಲಾರದ ಹುಡುಗ್ರ ಕಾಲು ಕುಂಟೆಂದ ಶುಭಾ
ಶುಭ ನುಡಿ ಕೇಳಿದ್ದೀರಾ. ಶುಭ ಗಾನ ಈಗ ಕೇಳಲು ಸಿದ್ಧರಾಗಿ. ನಾಯಕಿ ಶುಭ ಪೂಂಜಾ ಅವರು ವೃತ್ತಿ ಜೀವನದಲ್ಲಿ ಮೊದಲ ಬಾರಿ ಹಾಡು ಹೇಳಿದ್ದಾರೆ. ಅವರಿಗೆ ಹಾಡು ಹೇಳಲು ಶುಭ ಕಾಲ ಬಂತು ಅಂತ ಆಯಿತು.
"ಕುಣಿಲಾರದ ಹುಡುಗ್ರು ಕಾಲೆ ಕುಂಟಂತೆ, ಕೈಗೆ ಸಿಗದ ಹಣ್ಣನು ಹುಳಿ ಮಾವು ಅಂದ್ರಂತೆ, ಇರಲಾರದೇ ಇರುವೆ ಬಿಟ್ಕೋಂಡ್ ಕೆರ್ಕೋಂಡ್ರೆ ನಾನೇನು ಮಾಡೋದು ಐಲು ಪೈಲು..... ಎಂಬ ಗೀತೆಯನ್ನು ಶುಭ ಪೂಂಜಾ ಅವರು ಸೂರ್ಯವಂಶಿ ಅವರ ಸಂಗೀತ ನಿರ್ದೇಶನದಲ್ಲಿ ಹಾಡು ಹೇಳಿದ್ದಾರೆ.
ನಿರ್ದೇಶಕ ಪ್ರೇಮ್ ಅವರ ಶಿಷ್ಯ ರಾಕೇಶ್ ಸ್ವತಂತ್ರ ನಿರ್ದೇಶಕರಾಗಿ ಅನೇಕ ತರ್ಲೆಗಳನ್ನು ಒಂದು ಮನರಂಜನಾತ್ಮಕ ರೀತಿಯಲ್ಲಿ ಹೇಳಲಿದ್ದಾರೆ. ನಿರ್ಮಾಪಕ ಸಚ್ಚಿದಾನಂದ್ ಮತ್ತು ಸುರೇಶ್ ಕುಮಾರ್ ಅವರು ಗ್ರೀನ್ ಲೈನ್ ಟ್ರಾವೆಲ್ಸ್ ಅಡಿಯಲ್ಲಿ ಈ 'ತರ್ಲೆ ನನ್ ಮಕ್ಳು' ತಯಾರಾಗುತ್ತಿದೆ.
ಈ ಚಿತ್ರದ ಮುಖಾಂತರ ಸೂರ್ಯವಂಶಿ ಡೀಜೆ ಸಂಗೀತ ನಿರ್ದೇಶನಕ್ಕೆ ಆಗಮಿಸಿದ್ದಾರೆ. ಜೇರಾಲ್ಡ್ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿದ್ದಾರೆ. ಯತಿರಾಜ್, ಅಂಜನ ದೇಶ್ ಪಾಂಡೆ, ನಾಗಶೇಖರ್, ಶುಭಾ ಪೂಂಜಾ, ಸೌಜನ್ಯಾ ಹಾಗೂ ಇನ್ನಿತರರು ತಾರಾಗಣದಲ್ಲಿ ಇದ್ದಾರೆ. (ಒನ್ಇಂಡಿಯಾ ಕನ್ನಡ)