Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರ್ಕಸ್ 'ಚಿತ್ರ ತಕ್ಕ ಪಾಠ ಕಲಿಸಿದೆ: ದಯಾಳ್
''ಆ ಆಘಾತದಿಂದ ಚೇತರಿಸಿಕೊಂಡು 'ಕದ್ದು ಮುಚ್ಚಿ' ಚಿತ್ರವನ್ನು ಕೈಗೆತ್ತಿಕೊಂಡಿದ್ದೇನೆ. ಸರ್ಕಸ್ ಚಿತ್ರ ಒಳ್ಳೆ ಪಾಠ ಕಲಿಸಿದೆ. ಈ ಹಿಂದಿನ ತಪ್ಪುಗಳು ಈ ಚಿತ್ರದಲ್ಲಿ ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇನೆ ಎನ್ನುತ್ತಾರೆ ದಯಾಳ್. ಈ ಮಧ್ಯೆ ಸರ್ಕಸ್ ಚಿತ್ರವನ್ನು ದಯಾಳ್ ತನ್ನ ಸ್ನೇಹಿತರು ಹಾಗೂ ಸಂಬಂಧಿಗಳೊಂದಿಗೆ ಮತ್ತೊಮ್ಮೆ ವೀಕ್ಷಿಸಿದ್ದಾರಂತೆ. ಚಿತ್ರದಲ್ಲಿನ ದೋಷಗಳನ್ನು ತಿಳಿಯುವ ಪ್ರಯತ್ನ ತಮ್ಮದು ಎನ್ನುತ್ತಾರೆ ದಯಾಳ್.
ಚಿತ್ರದಲ್ಲಿನ ತಪ್ಪು ಒಪ್ಪುಗಳ ಬಗ್ಗೆ ನನ್ನ್ನ ಸ್ನೇಹಿತರು ಚರ್ಚಿಸಿದ್ದಾರೆ. ನನ್ನ ಮುಂದಿನ ಚಿತ್ರಗಳಲ್ಲಿ ಈ ರೀತಿಯ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸುತ್ತೇನೆ ಎಂದು ದಯಾಳ್ ತಿಳಿಸಿದ್ದಾರೆ. ಕದ್ದು ಮುಚ್ಚಿ ಚಿತ್ರದಲ್ಲಿ ದಿಗಂತ್ ಮತ್ತು ರಾಧಿಕಾ ಪಂಡಿತ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ''ಕದ್ದು ಮುಚ್ಚಿ ಎಂಬ ಶೀರ್ಷಿಕೆಯನ್ನು ಈಗಾಗಲೇ ಮತ್ತೊಬ್ಬರು ನೋಂದಾಯಿಸಿಕೊಂಡಿದ್ದಾರೆ. ಆ ಶೀರ್ಷಿಕೆಯನ್ನು ತಮಗೆ ಕೊಡುವಂತೆ ಅವರ ಬಳಿ ವಿನಂತಿಸಿಕೊಳ್ಳುತ್ತೇನೆ'' ಎಂದು ದಯಾಳ್ ತಿಳಿಸಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)