Don't Miss!
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಷನ್, ಕಟ್ ಹೇಳಲಿದ್ದಾರೆ ನವರಸ ನಾಯಕ ಜಗ್ಗೇಶ್!
ನವರಸ ನಾಯಕ ಜಗ್ಗೇಶ್ ಚಿತ್ತ ಈಗ ನಿರ್ದೇಶನದತ್ತ ಹೊರಳಿದೆ. ಆಕ್ಷನ್, ಕಟ್ ಹೇಳುವ ಸೂಚನೆಯನ್ನು ಸ್ವತಃ ಜಗ್ಗೇಶ್ ಅವರೇ ಕೊಟ್ಟಿದ್ದಾರೆ. ಅವರು ಕನ್ನಡ ಚಿತ್ರರಂಗಕ್ಕೆ ಅಡಿಯಿಟ್ಟು ಇಪ್ಪತ್ತೈದು ವರ್ಷಗಳೇ ಸರಿದು ಹೋಗಿವೆ. ಗಾಂಧಿನಗರದ ಎಲ್ಲ ತಂತ್ರ, ಕುತಂತ್ರಗಳನ್ನು ಅವರು ಅರ್ಥ ಮಾಡಿಕೊಂಡಿದ್ದಾರೆ. ನಿರ್ದೇಶನಕ್ಕೆ ಇದೇ ಸಕಾಲ ಎಂದು ಜಗ್ಗೇಶ್ ಅವರಿಗೆ ಅನ್ನಿಸಿದೆ.
''ತಾವು ನಿರ್ದೇಶಿಸುವ ಚಿತ್ರ ಗಾಂಧಿನಗರದ ಸಿದ್ಧ ಸೂತ್ರಗಳಿಂದ ಹೊರತಾಗಿರಬೇಕು ''ಎನ್ನುವ ಜಗ್ಗೇಶ್, ಆ ಚಿತ್ರದಲ್ಲಿ ತಾವೇ ನಟಿಸುವ ಸೂಚನೆಯನ್ನು ಕೊಟ್ಟಿದ್ದಾರೆ. ಸದ್ಯಕ್ಕೆ ಚಿತ್ರ ನಿರ್ದೇಶನದ ಪೂರ್ವ ತಯಾರಿಯಲ್ಲಿ ಜಗ್ಗೇಶ್ ಮಗ್ನರಾಗಿದ್ದಾರೆ. ಈ ಬಗ್ಗೆ ಅವರ ಮಗ ಗುರುರಾಜ್ ಜತೆ ಸಹ ಆಗಾಗ ಚರ್ಚಿಸುವುದುಂಟಂತೆ.
ಒಂದು ಕಡೆ ರಾಜಕೀಯ ಮತ್ತೊಂದೆಡೆ ಬಣ್ಣದ ಬದುಕು. ಈ ಎರಡು ಕ್ಷೇತ್ರಗಳಲ್ಲಿ ಬಿಜಿಯಾಗಿರುವ ಜಗ್ಗೇಶ್ ವರ್ಷಕ್ಕೊಂದು ಚಿತ್ರದಲ್ಲಿ ನಟಿಸುವುದಾಗಿ ತಿಳಿಸಿದ್ದಾರೆ. ಏತನ್ಮಧ್ಯೆ ಜಗ್ಗೇಶ್ ಅಭಿನಯದ 'ಎದ್ದೇಳು ಮಂಜುನಾಥ' ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಅವರ ಖುಷಿಯನ್ನು ಇಮ್ಮಡಿಸಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)