Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆನ್ಸಾರ್ ನಲ್ಲಿ ಗುಂಡ್ರಗೋವಿ ಪಾಸು
ಸುದರ್ಶನ್ ಕ್ರಿಯೇಷನ್ಸ್ ಲಾಂಛನದಲ್ಲಿ ಟಿ.ಎನ್. ಗೋಪಾಲಕೃಷ್ಣ ನಿರ್ಮಿಸುತ್ತಿರುವ ಗುಂಡ್ರಗೋವಿ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ದೊರೆತಿದ್ದು, ಏಪ್ರಿಲ್ ತಿಂಗಳ 3ನೇ ವಾರದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಕು ಸಕಲ ಸಿದ್ಧತೆಗಳು ನಡೆಯುತ್ತಿವೆ. ಚಿಕ್ಕಮಗಳೂರು ಜಿಲ್ಲೆಯ ಇಂದಾವರ, ಮತ್ತಾವರ ಗ್ರಾಮಗಳಲ್ಲಿ ಮಾತಿನ ಭಾಗ ಹಾಗೂ ರಾಜ್ಯದ ರಮಣೀಯ ತಾಣಗಳಲ್ಲಿ ಹಾಡುಗಳನ್ನು ಚಿತ್ರೀಕರಿಸಲಾಗಿದೆ.
ಆ ದಿನಗಳು ಚಿತ್ರದಲ್ಲಿ ಸರ್ದಾರ ಪಾತ್ರದಿಂದ ಜನಮನ ಸೂರೆಗೊಂಡಿದ್ದ ಸತ್ಯ ಈ ಚಿತ್ರದ ನಾಯಕ ಪಾತ್ರ ನಿರ್ವಹಿಸಿದ್ದಾರೆ. ಹಳ್ಳಿಯಲ್ಲಿ ಪೋಲಿಯಾಗಿ ಅಲೆಯುತ್ತ ಗುಂಡ್ರಗೋವಿ ಎನಿಸಿಕೊಂಡಿದ್ದ ನಾಯಕನ ವಿಶೇಷತೆಗಳೇನು ಎಂಬುದನ್ನು ನಿರ್ದೇಶಕ ಎಂ.ಜಿ. ತಾರೇಶ್ ಬಾಬು ತುಂಬಾ ಅದ್ಭುತವಾಗಿ ನಿರೂಪಿಸಿದ್ದಾರೆ.
ಕಳೆದ ವಾರ ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರವನ್ನು ಮೆಚ್ಚುಕೊಂಡು ಯಾವುದೇ ಕಟ್ ಇಲ್ಲದೆ ಯು/ಎ ಪ್ರಮಾಣ ಪತ್ರ ನೀಡಿದ್ದಾರೆ. ನಿರಂಜನ ಬಾಬುರವರ ಛಾಯಾಗ್ರಹಣ, ಫೀನಿಕ್ಸ್ ರಾಜನ್ ಅವರ ಸಂಗೀತ ಸಂಯೋಜನೆ ಇರುವ ಚಿತ್ರದ ತಾರಾಬಳಗದಲ್ಲಿ ಸತ್ಯ, ನವ್ಯಶ್ರೀ, ಶರತ್ ಲೋಹಿತಾಶ್ವ, ನೀನಾಸಂ ಅಶ್ವತ್ಥ್, ಆಶಾಲತಾ, ಶರಣ್, ಮೊದಲಾದವರಿದ್ದಾರೆ.