Don't Miss!
- News ‘ಹೇಳಿ ಸಿದ್ದರಾಮಯ್ಯನವರೇ , ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ?’
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೇಮ ವಿವಾಹದಲ್ಲಿ ಒಂದಾದ ಸತ್ಯ, ನಿರ್ಮಾಲಾ
ಬೆಂಗಳೂರಿನ ರಿಜಿಸ್ಟ್ರಾರ್ ಕಚೇರಿಯಲ್ಲಿ ನಟ ಸತ್ಯ (ಆ ದಿನಗಳು ಖ್ಯಾತಿ) ಹಾಗೂ ಕಿರುತೆರೆ ನಟಿ ನಿರ್ಮಾಲಾ ಒಬ್ಬರಿಗೊಬ್ಬರು ಹಾರ ಬದಲಾಯಿಸಿಕೊಳ್ಳುವ ಮೂಲಕ ಸೋಮವಾರ ದಾಂಪತ್ಯ ಜೀವನಕ್ಕೆ ಅಡಿಯಿಟ್ಟಿದ್ದಾರೆ. ಸತ್ಯ ಅಭಿನಯದ 'ಗುಂಡ್ರಗೋವಿ' ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
ಆ ದಿನಗಳು, ಸ್ಲಂ ಬಾಲ, ದುನಿಯಾ ಚಿತ್ರಗಳು ಸತ್ಯ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟ ಚಿತ್ರಗಳು. ರಘು ಜಯ ನಿರ್ದೇಶಿಸುತ್ತಿರುವ 'ರಾಜಧಾನಿ' ಚಿತ್ರದಲ್ಲೂ ಸತ್ಯ ಅಭಿನಯಿಸುತ್ತಿದ್ದಾರೆ. ಗೀತ ಸಾಹಿತಿ ಹಾಗೂ ಚಿತ್ರ ನಿರ್ದೇಶಕ ನಾಗೇಂದ್ರ ಪ್ರಸಾದ್ ಅವರ 'ವಿನಾಯಕರ ಗೆಳೆಯರ ಬಳಗ' ಚಿತ್ರಕ್ಕೂ ಸತ್ಯ ಸಹಿ ಹಾಕಿದ್ದಾರೆ.
ನಟಿ ನಿರ್ಮಾಲಾ ಸಹ ರಂಗಭೂಮಿ ಹಿನ್ನೆಲೆಯಿಂದ ಬಂದವರು. ಪಾರ್ವತಿ ಪರಮೇಶ್ವರ, ಮುತ್ತಿನ ತೋರಣ, ರಂಗೋಲಿಯಂತಹ ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ನಿರ್ಮಾಲಾ ಅಭಿನಯಿಸಿದ್ದಾರೆ. ಈಕೆ ಕನ್ನಡದ ವಿಭಿನ್ನ ಚಿತ್ರ 'ಹಾಡು ಹಕ್ಕಿಯನೇರಿ'ಯಲ್ಲೂ ನಟಿಸಿದ್ದಾರೆ.
ಸತ್ಯ ಮತ್ತು ನಿರ್ಮಲಾ ಇಬ್ಬರೂ ಒಟ್ಟಿಗೆ ನೀನಾಸಂನಲ್ಲಿ ರಂಗ ಶಿಕ್ಷಣ ಪಡೆದವರು. ಒಬ್ಬರನ್ನೊಬ್ಬರು ಮೆಚ್ಚ್ಚಿ, ಒಬ್ಬರ ಇಷ್ಟಗಳು ಇನ್ನೊಬ್ಬರಿಗೆ ತಾಳೆಯಾಗಿ ಈಗ ಪ್ರೇಮ ವಿವಾಹವಾಗಿದ್ದಾರೆ. ರಂಗಾಸಕ್ತರಾದ ಇವರಿಬ್ಬರ ಪ್ರೇಮ ಹತ್ತು ವರ್ಷಗಳ ಹಿಂದೆಯೇ ಚಿಗುರೊಡೆದಿತ್ತು. ಅಂದು ಚಿಗುರಿದ ಪ್ರೇಮ ಇಂದು ಕನಸಾಗಿದೆ. ಸತ್ಯ ಮತ್ತು ನಿರ್ಮಾಲಾ ಅವರಿಗೆ ಮದುವೆಯ ಶುಭಾಶಯಗಳು.