twitter
    For Quick Alerts
    ALLOW NOTIFICATIONS  
    For Daily Alerts

    ಈ ವಾರ ಬಹುನಿರೀಕ್ಷಿತ ತಮಸ್ಸು ತೆರೆಗೆ

    By Rajendra
    |

    'ಆ ದಿನಗಳು' ಎಂಬ ಯಶಸ್ವಿ ಚಿತ್ರ ಸೇರಿದಂತೆ ಕೆಲವು ಚಿತ್ರಗಳಿಗೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದ ಪತ್ರಕರ್ತ ಅಗ್ನಿಶ್ರೀಧರ್ 'ತಮಸ್ಸು' ಚಿತ್ರವನ್ನು ಬಹಳ ಆಸ್ಥೆಯಿಂದ ನಿರ್ದೇಶಿಸಿದ್ದಾರೆ. ಮೇಘ ಮೂವೀಸ್ ಲಾಂಛನದಲ್ಲಿ ಸೈಯದ್ ಅಮಾನ್ ಹಾಗೂ ರವೀಂದ್ರ ನಿರ್ಮಿಸಿರುವ 'ತಮಸ್ಸು' ಚಿತ್ರ ಈ ವಾರ(ಜೂ.11) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

    ಈ ಚಿತ್ರದ ಕಥೆಗಾರರಾಗಿರುವ ಅವರು ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ. ಸಂದೀಪ್ ಚೌಟ ಸಂಗೀತ ನೀಡಿದ್ದಾರೆ. ಶಿವರಾಜಕುಮಾರ್ ನಾಯಕನಾಗಿ, ಪದ್ಮಪ್ರಿಯ ನಾಯಕಿಯಾಗಿ ಅಭಿನಯಿಸಿರುವ ಚಿತ್ರದ ಉಳಿದ ತಾರಾಬಳಗದಲ್ಲಿ ನಾಸರ್, ಹರ್ಷಿಕಾ ಪೂಣಚ್ಛ, ಆಸೀಪ್, ಸುಧಾ ಬೆಳವಾಡಿ, ಸತ್ಯ ಮುಂತಾದವರಿದ್ದಾರೆ.

    ಸುಂದರನಾಥ ಸುವರ್ಣ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನಾಗೇಂದ್ರ ಅರಸ್ ಸಂಕಲನವಿದೆ. ಡಿಫ಼ರೆಂಟ್ ಡ್ಯಾನಿ ಸಾಹಸ, ಶಶಿಧರ್ ಅಡಪ ಕಲಾ ನಿರ್ದೇಶನ ಹಾಗೂ ಮಧುಗಿರಿ ಪ್ರಕಾಶ್ ಅವರ ನಿರ್ಮಾಣ ನಿರ್ವಹಣೆ 'ತಮಸ್ಸು ಚಿತ್ರಕ್ಕಿದೆ.

    Tuesday, June 8, 2010, 17:38
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X