Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಳ್ಳಾರಿ ಜೈಲಿಗೆ ವೀರಬಾಹು ದುನಿಯಾ ವಿಜಯ್!
ಇದೇನಿದು ಬಳ್ಳಾರಿ ಜೈಲಿಗೆ ದುನಿಯಾ ವಿಜಯ್. ಅವರೇನು ಅಂತಹ ತಪ್ಪು ಮಾಡಿದ್ದಾರೆ? ಬಳ್ಳಾರಿ ಜೈಲಿಗೆ ಯಾಕೆ ಹೋದರು? ಎಂದು ತಲೆಕೆಡಿಸಿಕೊಳ್ಳದೆ ಮುಂದೆ ಓದಿ. ಎಲ್ಲವೂ ನಿಮಗೇ ಅರ್ಥವಾಗುತ್ತದೆ!
ಚಿತ್ರದಲ್ಲಿ ನಾಯಕನದು ಶಾಂತ ಸ್ವಭಾವ. ಯಾರ ತಂಟೆಗೂ ಹೋದವನಲ್ಲ. ತನ್ನಷ್ಟಕ್ಕೆ ತಾನಿರುವಾತ. ಇಂಥ ವ್ಯಕ್ತಿಯ ಮೇಲೆ ಪೊಲೀಸಿನವರ ಕಣ್ಣು ಬೀಳುತ್ತದೆ. ಯಾರೊ ಮಾಡಿದ ಅಪರಾಧ ಈ ವ್ಯಕ್ತಿಯ ಮೇಲೆ ಬರುತ್ತದೆ. ಠಾಣೆಯಲ್ಲಿ ಬೆತ್ತದೇಟು ನೀಡಿದ ಪೊಲೀಸರು ಕೊನೆಗೆ ಈತನನ್ನು ಬಳ್ಳಾರಿ ಜೈಲಿಗೆ ಕಳಹಿಸುತ್ತಾರೆ.
ದುನಿಯಾ ವಿಜಯ್ ಅಭಿನಯಿಸುತ್ತಿರುವ 'ವೀರಬಾಹು' ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಈ ಸನ್ನಿವೇಶವನ್ನು ಮೈಸೂರಿನ ಸಮ್ಮರ್ ಪ್ಯಾಲೆಸ್ ಆವರಣದಲ್ಲಿ ಕಲಾ ನಿರ್ದೇಶಕ ರೇವಣ್ಣ ಮಳವಳ್ಳಿ ನಿರ್ಮಿಸಿದ ಜೈಲ್ ಸೆಟ್ನಲ್ಲಿ ಚಿತ್ರಿಸಿಕೊಳ್ಳಲಾಯಿತು. ನಾಯಕ ವಿಜಯ್ ಹಾಗೂ ಸಹ ಕಲಾವಿದರು ಈ ಸನ್ನಿವೇಶದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಮೈಸೂರಿನಲ್ಲಿ ಕೆಲವು ದಿನಗಳ ಚಿತ್ರೀಕರಣವಾದ ನಂತರ ಈಗ 'ವೀರಬಾಹು' ಚಿತ್ರದ ಚಿತ್ರೀಕರಣ ಮೇಲುಕೋಟೆಯಲ್ಲಿ ನಡೆಯುತ್ತಿದೆ ಎಂದು ನಿರ್ದೇಶಕ ಎಸ್.ಮಹೇಂದರ್ ತಿಳಿಸಿದ್ದಾರೆ. ವಿ.ಹರಿಕೃಷ್ಣರ ಸಂಗೀತವಿರುವ ಈ ಚಿತ್ರಕ್ಕೆ ಅನಂತ್ ಅರಸ್ ಅವರ ಛಾಯಾಗ್ರಹಣವಿದೆ. ದೀಪು ಎಸ್ ಕುಮಾರ್ ಸಂಕಲನ, ಪ್ರಸಾದ್ ಸಹ ನಿರ್ದೇಶನ, ಎಂ.ಎಸ್.ರಮೇಶ್ ಸಂಭಾಷಣೆ ಹಾಗೂ ವಿಜಯಕುಮಾರ್ ನಿರ್ಮಾಣ ನಿರ್ವಹಣೆಯಿದೆ.
ಚಿತ್ರದ ತಾರಾಬಳಗದಲ್ಲಿ ವಿಜಯ್, ನಿಧಿಸುಬ್ಬಯ್ಯ, ರಂಗಾಯಣರಘು, ರಾಜುತಾಳಿಕೋಟೆ, ಅವಿನಾಶ್, ಎಂ.ಎನ್.ಲಕ್ಷ್ಮೀದೇವಿ, ಎ.ಟಿ.ರಘು, ಅಚ್ಯುತ, ವಿನಯಪ್ರಸಾದ್ ಮುಂತಾದವರಿದ್ದಾರೆ. ಸಂದೇಶ್ ಕಂಬೈನ್ಸ್ ಲಾಂಛನದಲ್ಲಿ ಸಂದೇಶ್ನಾಗರಾಜ್ ಅವರು ನಿರ್ಮಿಸುತ್ತಿರುವ ಚಿತ್ರ.