Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆನಂದ್ ಚಿತ್ರದಿಂದ ಇಲ್ಲಿಯ ತನಕ ಶಿವಣ್ಣನ ಚಿತ್ರಲೋಕ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಛಾಯಾಚಿತ್ರಗಳ ಪ್ರದರ್ಶನವನ್ನು ಚಿತ್ರಲೋಕ ಡಾಟ್ ಕಾಂ ಆಯೋಜಿಸಿದೆ. ಆಗಸ್ಟ್ 6ರಂದು ಶಿವಣ್ಣನ 'ಚೆಲುವೆಯೇ ನಿನ್ನೇ ನೋಡಲು' ಚಿತ್ರ ಬಿಡುಗಡೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ನರ್ತಕಿ ಚಿತ್ರಮಂದಿರದಲ್ಲಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.
ಶಿವಣ್ಣನ ಮೊಟ್ಟ ಮೊದಲ 'ಆನಂದ್' ಚಿತ್ರದಿಂದ ಹಿಡಿದು ಈಗ ತೆರೆಕಾಣುತ್ತಿರುವ 'ಚೆಲುವೆಯೇ ನಿನ್ನೇ ನೋಡಲು' ಚಿತ್ರದ ಭಿತ್ತಿಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಜೊತೆಗೆ ಮೈಲಾರಿ, ಜೋಗಯ್ಯ ಹಾಗೂ ಆಪರೇಷನ್ ಗೋಲ್ಡನ್ ಗ್ಯಾಂಗ್ ಚಿತ್ರದ ಭಿತ್ತಿ ಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗುತ್ತದೆ.
ಕನ್ನಡ ಚಿತ್ರಗಳ ಛಾಯಾಚಿತ್ರ ಪ್ರದರ್ಶನಕ್ಕೆ 2006 ಮತ್ತು 2009ರಲ್ಲಿ ಎರಡು ಬಾರಿ ಚಿತ್ರಲೋಕ ಡಾಟ್ ಕಾಂನ ಸಂಪಾದಕ ಕೆ ಎಂ ವೀರೇಶ್ ಗೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ಒಲಿದಿದೆ. 2006ರಲ್ಲಿ ವೀರೇಶ್ ಮೊಟ್ಟಮೊದಲ ಚಿತ್ರಪ್ರದರ್ಶನವನ್ನು ಆಯೋಜಿಸಿದ್ದರು. 1934ರಲ್ಲಿ ತೆರೆಕಂಡ 'ಸತಿ ಸುಲೋಚನಾ' ಚಿತ್ರ ಸೇರಿದಂತೆ ಒಟ್ಟು 2650 ಛಾಯಾಚಿತ್ರಗಳನ್ನು ಪ್ರದರ್ಶಿಸಿದ್ದರು.
ಇಸವಿ 2009ರಲ್ಲಿ ಕನ್ನಡಚಿತ್ರರಂಗ ಅಮೃತ ಮಹೋತ್ಸವ ಆಚರಿಸಿಕೊಂಡ ಪ್ರಯುಕ್ತ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಂಡಿದ್ದರು. ಆಗ ಕನ್ನಡ ಚಿತ್ರಗಳ 3000 ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿತ್ತು. ಈಗ ಶಿವಣ್ಣನ ಅಭಿಮಾನಿಗಳಿಗೆಂದೇ ವಿಶೇಷ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.ನರ್ತಕಿಯಲ್ಲಿ ಶಿವಣ್ಣನ ಸಿಂಹಾವಲೋಕನವನ್ನು ಸವಿಯಬಹುದು.