Don't Miss!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಚ್ಚು, ಲಾಂಗಿಗೆ ಗುಡ್ ಬೈ ಹೇಳಿದ್ದಾನೆ ಡೆಡ್ಲಿ ಸೋಮ
'ಡೆಡ್ಲಿ ಸೋಮ' ಚಿತ್ರದ ಕೊನೆಯ ದೃಶ್ಯದಲ್ಲಿ ನಾಯಕ ಸತ್ತು ಹೋಗುತ್ತಾನೆ. ಆದರೆ ನಾಯಕ ಸತ್ತ ನಂತರ ಕತೆ ಮುಂದುವರಿಯಲು ಸಾಧ್ಯವೆ? ಕತೆ ಎಲ್ಲಿಂದ ಆರಂಭವಾಗುತ್ತದೆ? ಹೇಗೆ ಮುಂದುವರಿಯುತ್ತದೆ? ಸತ್ತವನು ಬದುಕಿಬರಲು ಸಾಧ್ಯವೆ? ಎಂಬ ಪ್ರಶ್ನೆಗಳಿಗೆ ಈ ವಾರ ತೆರೆಕಾಣುತ್ತಿರುವ 'ಡೆಡ್ಲಿ 2' ಚಿತ್ರ ತಕ್ಕ ಉತ್ತರ ನೀಡಲಿದೆ.
ಚಿತ್ರದ ನಿರ್ದೇಶಕ ರವಿ ಶ್ರೀವತ್ಸ ಚಿತ್ರಕಥೆಗಾಗಿ ನಾಲ್ಕು ತಿಂಗಳು ಶ್ರಮಿಸಿದ್ದಾರೆ. ಅಷ್ಟೆ ಚೆನ್ನಾಗಿ ಕತೆಯನ್ನು ಹೆಣೆದು ತೆರೆಗೆ ತರುತ್ತಿದ್ದಾರೆ ಎಂಬ ವಿಶ್ವಾಸವನ್ನು 'ಡೆಡ್ಲಿ 2' ಚಿತ್ರತಂಡ ವ್ಯಕ್ತಪಡಿಸಿದೆ. ಬಿಗ್ ಸಿನಿಮಾಸ್ ಮೂಲಕ ಈ ಚಿತ್ರವನ್ನು ತೆರೆಗೆ ತರಲಾಗುತ್ತಿದೆ.
ಯಾವುದೇ ಚಿತ್ರದ ಭಾಗ 2 ಎಂದರೆ ಪ್ರೇಕ್ಷಕರು ಇಷ್ಟಪಡುತ್ತಾರಾ? ಎಂಬ ಪ್ರಶ್ನೆಗೆ ಉತ್ತರ ಹುಡುಕುವುದು ಕಷ್ಟ. ಚಿತ್ರದ ನಾಯಕ ನಟ ಆದಿತ್ಯ ಈ ಚಿತ್ರಕ್ಕಾಗಿ ಬಹಳಷ್ಟು ಶ್ರಮಪಟ್ಟು ಅಭಿನಯಿಸಿದ್ದಾರೆ. ಚಿತ್ರದ ದೃಶ್ಯವೊಂದರಲ್ಲಿ ಸ್ವತಃ ಆದಿತ್ಯ ಎಪ್ಪತ್ತು ಅಡಿ ಎತ್ತರದಿಂದ ಜಿಗಿದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು.
ಸಾಹಸ, ಸೆಂಟಿಮೆಂಟ್ ಪ್ರಧಾನವಾದ ಈ ಚಿತ್ರದಲ್ಲಿ ಸಮಾಜಕ್ಕೆ ಸಂದೇಶವೂ ಇದೆಯಂತೆ. ಚಿತ್ರದಲ್ಲಿ ಮಚ್ಚು, ಲಾಂಗ್ ಗಳಿಗೆ ಗುಡ್ ಬೈ ಹೇಳಲಾಗಿದೆ. ನೈಜತೆಗೆ ಹೆಚ್ಚು ಒತ್ತು ಕೊಟ್ಟು ಚಿತ್ರವನ್ನು ರೂಪಿಸಲಾಗಿದೆ. ಒಟ್ಟಿನಲ್ಲಿ ಈ ಚಿತ್ರ ಹೇಗೆ ಪ್ರೇಕ್ಷಕರ ಹೃದಯ ತಟ್ಟುತ್ತದೆ ಎಂಬುದನ್ನು ಕಾದುನೋಡಬೇಕು.