Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಬ್ರಿ ಮಸೀದಿ ತೀರ್ಪಿನಂದು ಅದ್ದೂರಿಗೆ ಚಾಲನೆ
ಆಕ್ಷನ್ ಕಿಂಗ್ ಅರ್ಜು ನ್ ಸರ್ಜಾ ಅವರ ಸಂಬಂಧಿ ಧ್ರುವ ಸರ್ಜಾ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಅದ್ದೂರಿ' ಚಿತ್ರದ ಚಿತ್ರೀಕರಣ ಮುಂದೂಡಲ್ಪಟ್ಟಿದೆ. ಸೆಪ್ಟೆಂಬರ್ 15ರಂದೇ ಈ ಚಿತ್ರ ಸೆಟ್ಟೇರಬೇಕಾಗಿತ್ತು. ಚಿತ್ರೀಕರಣಕ್ಕೆ ಅನುವಾದ ಹವಾಮಾನ ಇಲ್ಲ ಎಂಬ ಕಾರಣಕ್ಕೆ ಚಿತ್ರೀಕರಣನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಲಾಗಿದೆ. ಅಂದರೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬೀಳುವ ದಿನ.
'ಅದ್ದೂರಿ' ಚಿತ್ರದ ಚಿತ್ರೀಕರಣ ಊಟಿಯಲ್ಲಿ ಆರಂಭವಾಗಬೇಕಿತ್ತು. ಆದರೆ ಊಟಿಯಲ್ಲಿ ಧೋ ಎಂದು ಮಳೆ ಸುರಿಯುತ್ತಿದೆ. ಮೋಡಗಳ ಮರೆಗೆ ಸರಿದಿರುವ ಸೂರ್ಯ ಮುಖ ತೋರಿಸದ ಹೊರತು ಚಿತ್ರೀಕರಣ ಸಾಧ್ಯವಿಲ್ಲ. ಹಾಗಾಗಿ ಚಿತ್ರೀಕರಣಕ್ಕೆ ಪ್ಯಾಕಪ್ ಹೇಳಲಾಗಿದೆ ಎಂದು ಚಿತ್ರದ ನಾಯಕಿ ರಾಧಿಕಾ ಪಂಡಿತ್ ತಿಳಿಸಿದ್ದಾರೆ.
ಏತನ್ಮಧ್ಯೆ ಬಿಡುಗಡೆಗೆ ಸಜ್ಜಾಗಿರುವ 'ಗಾನ ಬಜಾನ' ಚಿತ್ರದ ಪ್ರಚಾರದಲ್ಲಿ ರಾಧಿಕಾ ಪಂಡಿತ್ ಬಿಜಿಯಾಗಿದ್ದಾರೆ. ಆಕೆ ಅಭಿನಯದ 'ಕೃಷ್ಣನ್ ಲವ್ ಸ್ಟೋರಿ' ಚಿತ್ರ ಶತಕ ಬಾರಿಸಿರುವ ಬಗ್ಗೆಯೂ ರಾಧಿಕಾ ಸಂತಸ ವ್ಯಕ್ತಪಡಿಸಿದ್ದಾರೆ. ಅಂದಹಾಗೆ 'ಅದ್ದೂರಿ' ಚಿತ್ರಕ್ಕೆ ಶಂಕರ್ ರೆಡ್ಡಿ ನಿರ್ಮಾಪಕರು. ಎಪಿ ಅರ್ಜುನ್ ನಿರ್ದೇಶಿಸುತ್ತಿರುವ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜನೆ ಇದೆ.