Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈಜು ಕೊಳಕ್ಕೆ ಬಿದ್ದು ಗಾಯಕಿ ಚಿತ್ರಾ ಮಗಳ ದುರಂತ ಸಾವು
ಚಿತ್ರಾ ಮತ್ತು ವಿಜಯಶಂಕರ್ ಅವರು ಮದುವೆಯಾದ ಎಂಟು ವರ್ಷಗಳ ಬಳಿಕ ಮಗಳು ನಂದನಾ ಜನಿಸಿದ್ದರು. ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಸಿಕೊಡುವ ಸಲುವಾಗಿ ಚಿತ್ರಾ ಅವರು ತಮ್ಮ ತಂಡದೊಡನೆ ದುಬೈಗೆ ಹೋಗಿದ್ದರು. ಆಸ್ಕರ್ ಪ್ರಶಸ್ತಿ ಪುರಸ್ಕೃತ ಎ ಆರ್ ರೆಹಮಾನ್ ಅವರ ಸಂಗೀತ ಸಂಯೋಜನೆಯ ಸಂಗೀತ ಕಾರ್ಯಕ್ರಮ ಇಂದು ಸಂಜೆ ಶಾರ್ಜಾ ಕ್ರೀಡಾಂಗಣದಲ್ಲಿ ನಡೆಯಬೇಕಾಗಿದೆ.
ದಕ್ಷಿಣ ಭಾರತದ "ಮರಿ ಕೋಗಿಲೆ" ಎಂಬ ಹೆಗ್ಗಳಿಕೆಗೆ ಕೆ ಎಸ್ ಚಿತ್ರಾ ಪಾತ್ರರಾಗಿದ್ದರು. ಹತ್ತಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡಿರುವ ಚಿತ್ರಾ ಆರು ಬಾರಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದರು. ಈ ಮೂಲಕ ಭಾರತದಲ್ಲೇ ಅತಿ ಹೆಚ್ಚು ರಾಷ್ಟ್ರ ಪ್ರಶಸ್ತಿಗಳನ್ನು ಪಡೆದ ಮಹಿಳಾ ಗಾಯಕಿ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಕನ್ನಡದಲ್ಲಿ ಇತ್ತೀಚೆಗೆ ಸ್ಕೂಲ್ ಮಾಸ್ಟರ್, ನೆನೆಯುವೆ ನಿನ್ನೆ, ತಾರೆ ಚಿತ್ರಗಳಿಗೆ ಹಿನ್ನೆಲೆ ಗಾಯನ ನೀಡಿದ್ದರು.
ಚಿತ್ರಾ ಅವರು ಕನ್ನಡಲ್ಲಿ ಹಾಡಿರುವ ಬಹಳಷ್ಟು ಹಾಡುಗಳು ಜನಪ್ರಿಯವಾಗಿವೆ. ಅವುಗಳಲ್ಲಿ 'ಅರುಣರಾಗ' ಚಿತ್ರದ "ನಾನೊಂದು ತೀರಾ ನೀನೊಂದು ತೀರಾ ಮನಸು ಮನಸು ದೂರ ಪ್ರೀತಿ ಹೃದಯ ಭಾರ..." ಎಂಬ ಹಾಡು ದುಃಖದಲ್ಲಿರುವವರಿಗೆ ಸಾಂತ್ವನ ನೀಡುತ್ತದೆ. ಈ ಸಂದರ್ಭದಲ್ಲಿ ಈ ಹಾಡನ್ನು ನೆನೆಸಿಕೊಳ್ಳಬೇಕಾಗಿರುವುದು ನಿಜಕ್ಕೂ ವಿಷಾದನೀಯ. 'ಪುತ್ರ (ತ್ರಿ) ಶೋಕಂ ನಿರಂತರಂ' ಎಂಬ ಮಾತಿಗೆ, ಚಿತ್ರಾ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ.