Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀರಾಘವೇಂದ್ರ ಸ್ವಾಮಿ ದರ್ಶನ ಭಾಗ್ಯ ಪಡೆದ ಪ್ರೇಮ್
ಲವ್ಲಿ ಸ್ಟಾರ್ ಪ್ರೇಮ್ ಕುಮಾರ್ ಗುರುವಾರ ಶ್ರೀಕ್ಷೇತ್ರ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರಸ್ವಾಮಿ ಬೃಂದಾವನ ದರ್ಶನ ಪಡೆದರು ಭಾಗ್ಯ ಪಡೆದರು. ಮಠದ ಸಾರ್ವಜನಿಕ ಸಂಪರ್ಕಾಧಿಕಾರಿ ವಿಷ್ಣುತೀರ್ಥ ಅವರು ಪ್ರೇಮ್ ಅವರಿಗೆ ಸ್ವಾಗತಿಸಿ ಭರಮಾಡಿಕೊಂಡರು.
ಮೊದಲು ಗ್ರಾಮದೇವತೆಯ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ಶ್ರೀರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಮಠಾಧೀಶರು ಸ್ವಾಮಿಜಿಗಳ ಶೇಷವಸ್ತ್ರದೊಂದಿಗೆ ಸತ್ಕರಿಸಿ, ಫಲಮಂತ್ರಾಕ್ಷತೆ, ತೀರ್ಥ ಪ್ರಸಾದಗಳನ್ನು ನೀಡಿ ಆಶೀರ್ವದಿಸಿದರು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಪ್ರೇಮ್, ಇದುವರೆಗೂ ಒಟ್ಟು 15 ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಇವುಗಳಲ್ಲಿ ನೆನಪಿರಲಿ, ಜೊತೆಜೊತೆಯಲಿ, ಪಲ್ಲಕ್ಕಿ, ಮತ್ತೆ ಬನ್ನಿ ಪ್ರೀತ್ಸೋಣ ಚಿತ್ರಗಳು ಬೆಳ್ಳಿಹಬ್ಬ ಆಚರಿಸಿಕೊಂಡಿದ್ದು ತಮಗೆ ತೃಪ್ತಿ ನೀಡಿದೆ ಎಂದರು. ತಮ್ಮ ಅಭಿನಯದ ಹೊಚ್ಚ ಹೊಸ 'ಶತ್ರು' ಚಿತ್ರದಲ್ಲಿ ತಮ್ಮದು ಎಸಿಪಿ ಪಾತ್ರ. ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿರುವುದಾಗಿ ತಿಳಿಸಿದರು. (ಏಜೆನ್ಸೀಸ್)