•  

ನಾನು ನಿಮ್ಮವನು ನಿಮ್ಮ ಮನೆ ಮಗನೂ, ಶಿವಣ್ಣ

ಬುಧವಾರ, ಫೆಬ್ರವರಿ 1, 2012, 15:06 [IST]
ಪ್ರತಿಯೊಂದು ಸಂಸ್ಥೆಯು ಮಾನವೀಯ ನೆಲೆಗಟ್ಟಿನಲ್ಲಿ, ಪರೋಪಕಾರಕ್ಕೆ ಪ್ರಾಧಾನ್ಯತೆ ನೀಡಬೇಕಾದ ಅವಶ್ಯಕತೆ ಇದೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ. ಅವರು ಅನುಶ್ರುತ ಫೌಂಡೇಷನ್ ಟ್ರಸ್ಟ್ ವತಿಯಿಂದ ಮಹಾಲಕ್ಷ್ಮಿ ಬಡಾವಣೆ ಕ್ಷೇತ್ರದ ಕುರುಬರಹಳ್ಳಿ ವೃತ್ತದಲ್ಲಿ ಆರಂಭಿಸಿರುವ ನೂತನ ಉದ್ಯೋಗ ಕೌಶಲ ತರಬೇತಿ ಹಾಗೂ ಅಭಿವೃದ್ಧಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಕೆಲವರು ಹೆಸರಿಗೋಸ್ಕರ, ಮತ್ತೆ ಕೆಲವರು ಖ್ಯಾತಿಗಾಗಿ ಇಂತಹ ಕೆಲಸಗಳನ್ನು ಮಾಡುತ್ತಾರೆ. ಆದರೆ ಶಾಸಕ ನೆ ಲ ನರೇಂದ್ರ ಬಾಬು ಅವರು ಮಾನವೀಯ ನೆಲೆಗಟ್ಟಿನಲ್ಲಿ ಉದ್ಯೋಗ ಕೌಶಲ ಕೇಂದ್ರ ಸ್ಥಾಪಿಸಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಶಿವಣ್ಣ ಬಣ್ಣಿಸಿದರು. ಅವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಮಾತಿಗಿಂತ ಕೃತಿ ಮುಖ್ಯ. ಅದೇ ಇತರರಿಗೆ ಆದರ್ಶವಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ ಶಿವಣ್ಣ ಒಂದು ಹಾಡನ್ನೂ ಹಾಡಿದರು, ನಾನು ನಿಮ್ಮವನು, ನಿಮ್ಮ ಮನೆ ಮಗನೂ..." ಶಿವಣ್ಣನ ಹಾಡಿಗೆ ಸಭಿಕರ ಕರತಾಡನ ಮುಗಿಲು ಮುಟ್ಟಿತು. (ಏಜೆನ್ಸೀಸ್)

User Comments
[ ಅಭಿಪ್ರಾಯ ಬರೆಯಿರಿ ]
ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.
    Upcoming Matches
SL Vs PAK - 1st Twenty20 Fri 1st Jun Int2020
SL Vs PAK - 2nd Twenty20 Sun 3rd Jun Int2020
ENG Vs WI - 3rd Test at Edgbaston Thu 7th Jun Test
Follow Oneindia Kannada on Twitter
Oneindia Kannada Facebook fan page
Write Comments on this Article