Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭೀಮಾ ತೀರದಲ್ಲಿ' ಸ್ಟೋರಿ ನಿಜಕ್ಕೂ ಯಾರ ಸ್ವತ್ತು?
"ಚಂದಪ್ಪ ಹರಿಜನ ಬಗ್ಗೆ ಮೊದಲು ಬರೆದದ್ದು ನಾನು. ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆಗೆ ಮಾಹಿತಿ, ಫೋಟೋ ಕೊಟ್ಟದ್ದೂ ನಾನೇ. ಪುಸ್ತಕದಲ್ಲಿ ಸೌಜನ್ಯಕ್ಕೂ ನನ್ನ ಹೆಸರು ಹಾಕಿಲ್ಲ" ಎಂದು ಪತ್ರಕರ್ತ ಟಿ.ಕೆ.ಮಳಗೊಂಡ ಎಂಬುವವರು ಕನ್ನಡಪ್ರಭ ಪತ್ರಿಕೆಯಲ್ಲಿ ನೇರವಾಗಿ ಆರೋಪಿಸುವ ಮೂಲಕ "ಭೀಮಾ ತೀರದ" ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ.
'ಅಪರಾಧಕ್ಕೆ ಸವಾಲು' ಎಂಬ ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿರುವ ಇವರು, ಭೀಮಾ ತೀರದ ಸರಣಿ ಹತ್ಯೆಗಳ ಕುರಿತು ಮೊದಲು ವರದಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ರವಿ ಬೆಳಗೆರೆ ಅವರನ್ನು ಮಹಾನ್ ಸುಳ್ಳುಗಾರ ಎಂದು ಜರಿದಿರುವ ಮಳಗೊಂಡ, ಭೀಮಾ ತೀರದ ಹತ್ಯೆಗಳು, ಹಂತಕರನ್ನು ವಿಜೃಂಭಿಸಿ, ಅತಿರಂಜಿತ ವರದಿಗಳನ್ನು ಮಾಡಿ ಮತ್ತಷ್ಟು ರಕ್ತಪಾತ ಹೆಚ್ಚಲು ಬೆಳಗೆರೆ ಕಾರಣವಾಗಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದಾರೆ.
ತಮ್ಮ ವರದಿಗಳನ್ನು ತಿರುವು ಮರುವು ಮಾಡಿ ರವಿ ಬೆಳಗೆರೆ ಅವರು ತಮ್ಮ ಹಾಯ್ ಬೆಂಗಳೂರಿನಲ್ಲಿ ಪ್ರಕಟಿಸಿಕೊಂಡಿದ್ದಾರೆ. ಈಗ ಅವರು ನಾನೇ ಮೊದಲು ಪ್ರಕಟಿಸಿದ್ದು ಎಂದು ಹೇಳಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಳಗೊಂಡ ವಿಷಾದಿಸಿದ್ದಾರೆ.