Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಂಡುಪಾಳ್ಯಕ್ಕೆ ಹದಿಮೂರು ಕಡೆ ಕತ್ತರಿ ಪ್ರಯೋಗ
ಚಿತ್ರದ ನಿರ್ಮಾಪಕರು, ನಿರ್ದೇಶಕರು ಹಾಗೂ ಚಿತ್ರತಂಡ ದಂಡುಪಾಳ್ಯಕ್ಕೆ ಎ ಸರ್ಟಿಫಿಕೇಟ್ ಗ್ಯಾರಂಟಿ ಎಂಬ ನಿರೀಕ್ಷೆಯಲ್ಲಿದೆ. ಚಿತ್ರದಲ್ಲಿ ಕೆಲವೊಂದು ಹಸಿಬಿಸಿ ಸನ್ನಿವೇಶಗಳಿದ್ದು ಅವಕ್ಕೆ ಕತ್ತರಿ ಹಾಕುವಂತೆ ಸೆನ್ಸಾರ್ ಮಂಡಳಿ ಸೂಚಿಸಿದೆ.
ನೈಜ ಘಟನೆಯಾಧಾರಿದ ದಂಡುಪಾಳ್ಯ ಚಿತ್ರಕ್ಕೆ ಆರಂಭದಿಂದಲೂ ಒಂದಲ್ಲ ಒಂದು ವಿವಾದಗಳು ಬೆನ್ನಿಗೆ ಬಿದ್ದಿದ್ದವು. ಅವುಗಳಲ್ಲಿ ಕತೆ ಕದ್ದ ಆರೋಪವೂ ಒಂದು. 'ದಂಡುಪಾಳ್ಯ ಹಂತಕರು' ಎಂಬ ತಮ್ಮ ಪುಸ್ತಕವನ್ನು ಯಥಾವತ್ತಾಗಿ ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ತೆರೆಗೆ ತರುತ್ತಿದ್ದಾರೆ ಎಂದು ಮೈಸೂರಿನ ಲೇಖಕ ಶ್ರೀನಾಥ್ ಆರೋಪಿಸಿದ್ದರು. ಬಳಿಕ ಚಲನಚಿತ್ರ ವಾಣಿಕ್ಯ ಮಂಡಳಿ ಮಧ್ಯಸ್ಥಿಕೆಯಲ್ಲಿ ವಿವಾದ ತಣ್ಣಗಾಗಿತ್ತು.
ದಂಡುಪಾಳ್ಯ ಗ್ಯಾಂಗ್ ಬಗ್ಗೆ ಒಂದಿಷ್ಟು: ಹತ್ತು, ಇಪ್ಪತ್ತು, ಮೂವತ್ತರಂತೆ ಜಮಾಯಿಸಿಕೊಂಡ ಇವರ ಗುಂಪಿನ ಒಟ್ಟು ಸದಸ್ಯರ ಬಲ 80. ಮೂಲ ಕಸುಬಿನಿಂದ ದೂರ ಸರಿದ ಈ ದಂಡುಪಾಳ್ಯ ಗ್ಯಾಂಗ್, ಪಾತಕ ಸಾಮ್ರಾಜ್ಯಕ್ಕೆ ಎಂಟ್ರಿ ಕೊಟ್ಟಿತು. ಹೆಣ್ಣು, ಹೊನ್ನಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿ ಇಟ್ಟುಕೊಂಡ ಗ್ಯಾಂಗ್ ಯಾವುದೇ ಕಿಂಚಿತ್ ಸುಳಿವು ಇಲ್ಲದೆ ಅಮಾಯಕರ ಕೈ ಕಟ್, ಕಾಲ್ ಕಟ್, ರುಂಡಮುಂಡ ಬೇರೆ ಮಾಡಿದ ಅದೆಷ್ಟೋ ಉದಾಹರಣೆಗಳು ಪೋಲೀಸ್ ಮತ್ತು ಗೃಹ ಇಲಾಖೆಯನ್ನು ಅಕ್ಷರಸಃ ಬೆಚ್ಚಿ ಬೀಳಿಸಿತು.
ಕೆಜಿಎಫ್ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಠಾಣೆಯಲ್ಲೇ ಮರ್ಡರ್ ಮಾಡಿದ್ದು ಈ ಪಾತಕಿ ಗ್ಯಾಂಗ್ ಗಳ ನೋಟೆಡ್ ಕ್ರೈಂಗಳಲ್ಲೊಂದು. ಪೋಲೀಸ್ ಇಲಾಖೆ ಪಟ್ಟಿ ಮಾಡಿದ ಪ್ರಕಾರ ದಂಡುಪಾಳ್ಯ ಗ್ಯಾಂಗ್ ಮೇಲೆ ಇರೋ ದುಷ್ಕೃತ್ಯಗಳ ಪಟ್ಟಿಯೆಂದರೆ 57 ಮರ್ಡರ್, 66 ಡಕಾಯಿತಿ, 50ಕ್ಕೂ ಹೆಚ್ಚು ಅತ್ಯಾಚಾರ, ಹಾಫ್ ಮರ್ಡರ್ ಗಳೆಲ್ಲಾ ಲೆಕ್ಕವಿಲ್ಲದಷ್ಟು.
ದೊಡ್ಡ ಹನುಮ, ವೆಂಕಟರಮಣ, ಸೀನ, ಮುನಿಕೃಷ್ಣ, ಗೋಧಿ ತಮ್ಮ, ಲಕ್ಷ್ಮಿ ಮುಂತಾದವರು ಈ ಗ್ಯಾಂಗ್ ನ ಪ್ರಮುಖ ಸದಸ್ಯರು. ಆ ಕಾಲದಲ್ಲಿ ಪೋಲೀಸ್ ಇಲಾಖೆ ಕಂಡ ದಕ್ಷ ಮತ್ತು ಡೈನಾಮಿಕ್ ಪೋಲೀಸ್ ಅಧಿಕಾರಿ ತಮ್ಮಯ್ಯ ಈ ಗ್ಯಾಂಗ್ ಸದಸ್ಯರುಗಳನ್ನು ಒಂದು ಹಂತಕ್ಕೆ ಮಟ್ಟ ಹಾಕಿದ್ದರು.
1999 -2000 ರಲ್ಲಿ ಬೆಂಗಳೂರಿನಿಂದ ಡೆಪ್ಯೂಟೆಶನ್ ಮೇಲೆ ಬಂದ ಪೋಲೀಸ್ ಅಧಿಕಾರಿಯೇ ಚಲಪತಿ. ದಂಡುಪಾಳ್ಯ ಗ್ಯಾಂಗ್ ನ ಪಾತಕಿಗಳಿಗೆ ಇನ್ನೊಂದು ಲೋಕ ತೋರಿಸಿದ ಲಯನ್ ಹಾರ್ಟೆಡ್ ಎಸ್ ಐ ಚಲಪತಿ. ಪಾತಕಿ ಗ್ಯಾಂಗ್ ಮುಟ್ಟಿ ನೋಡಿಕೊಳ್ಳುವಂತೆ ಬೆಂಡೆತ್ತಿದ ಚಲಪತಿ ನೇತೃತ್ವದ ಪೋಲೀಸ್ ಪಡೆ ದಂಡುಪಾಳ್ಯ ಗ್ಯಾಂಗ್ ಅನ್ನು ಹೇಳ ಹೆಸರಿಲ್ಲದೆ ನಿರ್ನಾಮ ಮಾಡಿತು.
ದಂಡುಪಾಳ್ಯದ ಬಗ್ಗೆ ಇಷ್ಟೆಲ್ಲಾ ಯಾಕೆ ನೆನಪಾಯಿತೆಂದರೆ ಭಯಾನಕವಾದ ಒಂದು ಕಥಾನಕ ಧರಿಸಿದ ಒಂದು ಕನ್ನಡ ಸಿನಿಮಾ ನಮ್ಮೆದುರಿಗೆ ಬರುತ್ತಿದೆ. ಚಿತ್ರೀಕರಣ ಹಂತದಲ್ಲಿರುವ ದಂಡುಪಾಳ್ಯಕ್ಕೆ ಮಳೆಹುಡುಗಿ ಪೂಜಾ ಗಾಂಧಿ ನಾಯಕಿ. ಈ ಚಿತ್ರದಲ್ಲಿ ಪೂಜಾ ಅರೆನಗ್ನ ಫೋಸ್ ಕುಟ್ಟಿದ್ದು ವಿವಾದಕ್ಕೆ ಕಾರಣವಾಗಿದೆ. ಈ ವಿಷಯ ಕನ್ನಡ ಚಿತ್ರ ಮತ್ತು ಕಿರುತೆರೆ ಸುದ್ದಿಗಳನ್ನು ಗಮನಿಸುವವರಿಗೆ ಗೊತ್ತೇ ಇರುತ್ತದೆ. (ಒನ್ಇಂಡಿಯಾ ಕನ್ನಡ)