Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಂಡುಪಾಳ್ಯಕ್ಕೆ ಈಗ ಹೊಸ ಹೆಸರು ಗಾಂಧಿನಗರ
ಬೆಂಗಳೂರಿನಿಂದ 35 ಕಿ.ಮೀ ದೂರದಲ್ಲಿರುವ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಹೆಸರು ಈಗ ಬದಲಾಗಿದೆ. ತಮ್ಮ ಊರಿನ ಹೆಸರು ಬದಲಾಯಿಸಬೇಕು ಎಂದು ಗ್ರಾಮಸ್ಥರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದರು ಪ್ರಯೋಜನವಾಗಿರಲಿಲ್ಲ. "ನೀವ್ಯಾಕೆ ನಿಮ್ಮ ಊರಿನ ಹೆಸರನ್ನು ಫ್ಲೋರಿಡಾ" ಎಂದು ಬದಲಾಯಿಸಿಕೊಳ್ಳ ಬಾರದು ಕೋರ್ಟ್ ಚಟಾಕಿ ಹಾರಿಸಿತ್ತು.
ಇದನ್ನೇ ಸೀರಿಯಸ್ಸಾಗಿ ತೆಗೆದುಕೊಂಡ ಗ್ರಾಮಸ್ಥರು ತಮ್ಮ ಊರಿಗೆ ಗಾಂಧಿನಗರ ಎಂದು ಹೊಸದಾಗಿ ನಾಮಕರಣ ಮಾಡಿದ್ದಾರೆ. ಕನ್ನಡ ಚಿತ್ರೋದ್ಯಮದ ಶಕ್ತಿಕೇಂದ್ರ ಗಾಂಧಿನಗರ ಮೇಲಿನ ಪ್ರೀತಿಗೋ ಅಥವಾ ದ್ವೇಷಕ್ಕೋ ಏನೋ ಗೊತ್ತಿಲ್ಲ.
ಒಂದು ಮಾತಿದೆಯಲ್ಲಾ ಶತ್ರುವಿನ ಹೆಸರನ್ನು ಸಾಕುನಾಯಿಗೆ ಇಡಬೇಕು ಎಂಬಂತೆ ಇವರು ಒಂಚೂರು ಬದಲಾವಣೆ ಮಾಡಿಕೊಂಡು ತಮ್ಮ ಊರಿಗೆ ಇಟ್ಟುಕೊಂಡಿದ್ದಾರೆ. ಅಥವಾ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಮೇಲಿನ ಪ್ರೀತಿಗೂ ಇರಬಹುದು.
ಒಟ್ಟಿನಲ್ಲಿ ಹೆಸರು ಬದಲಾಗಿರುವ ಸುದ್ದಿಯನ್ನು 'ಟೈಂಸ್ ಆಫ್ ಇಂಡಿಯಾ' ದಿನಪತ್ರಿಕೆ ಮುಖಪುಟದಲ್ಲಿ ಪ್ರಕಟಿಸಿದೆ. ಅದರಲ್ಲೂ ಪೂಜಾಗಾಂಧಿ ಪ್ರಮುಖ ಪಾತ್ರದಲ್ಲಿರುವ 'ದಂಡುಪಾಳ್ಯ' ಚಿತ್ರ ಬಿಡುಗಡೆಯಾದ ಮೇಲಂತೂ ಚಿತ್ರದ ಶೀರ್ಷಿಕೆ ಬದಲಾಯಿಸುವಂತೆ ಗ್ರಾಮಸ್ಥರು ತೀವ್ರವಾಗಿ ಆಗ್ರಹಿಸಿದ್ದರು.
ಯಾರೋ ಕೆಲವರು ಮಾಡಿದ ದರೋಡೆ ಹಾಗೂ ಕೊಲೆ ಕೃತ್ಯಗಳಿಂದಾಗಿ ಇಡೀ ನಮ್ಮ ಊರಿಗೆ ಕೆಟ್ಟ ಹೆಸರು ಬಂದಿದೆ. ಕೃತ್ಯದಲ್ಲಿ ತೊಡಗಿದ್ದವರನ್ನು ದಂಡುಪಾಳ್ಯ ಗ್ಯಾಂಗ್ ಎಂದು ಕರೆದಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ತಮ್ಮ ನೋವು ತೋಡಿಕೊಂಡಿದ್ದರು.
ಇಡೀ ಊರಿಗೆ ಅಂಟಿಕೊಂಡಿರುವ ಈ ಕುಖ್ಯಾತಿಯಿಂದಾಗಿ ನಮ್ಮ ಊರಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ನಮ್ಮೂರಿನೊಂದಿಗೆ ಸಂಬಂಧ ಬೆಳೆಸುತ್ತಿಲ್ಲ. ಊರಿನವರೆಲ್ಲರನ್ನೂ ಕೆಟ್ಟಭಾವದಿಂದ ನೋಡಲಾಗುತ್ತಿದೆ ಎಂದು ಗ್ರಾಮಸ್ಥರು ತಮ್ಮ ಅಸಹನೆಯನ್ನು ಹೊರಹಾಕಿದ್ದರು.
ಚಿತ್ರದ ಶೀರ್ಷಿಕೆ ಬದಲಾಯಿಸಲು ಸಾಧ್ಯವಾಗುವುದಿಲ್ಲ. ಬೇಕಿದ್ದರೆ ನಿಮ್ಮ ಊರಿನ ಹೆಸರನ್ನೇ ಬದಲಾಯಿಸಿಕೊಳ್ಳಿ ಎಂದು ಕೋರ್ಟ್ ಸಲಹೆ ನೀಡಿದ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಗ್ರಾಮಸ್ಥರು ತಮ್ಮ ಊರಿಗೆ 'ಗಾಂಧಿನಗರ' ಎಂದು ಹೆಸರಿಟ್ಟಿದ್ದಾರೆ.
ಈ ಬಗ್ಗೆ ದಂಡುಪಾಳ್ಯ ಕೌನ್ಸಿಲರ್ 'ಟೈಂಸ್' ಪತ್ರಿಕೆ ಜೊತೆ ಮಾತನಾಡುತ್ತಾ, "ಚಿತ್ರಕ್ಕೆ ದಂಡುಪಾಳ್ಯ ಶೀರ್ಷಿಕೆ ಇಡದಂತೆ ನಿರ್ಮಾಪಕರಿಗೆ ಕರೆಮಾಡಿದರೂ ನಯಾಪೈಸೆಯಷ್ಟು ಪ್ರಯೋಜವಾಗಿರಲಿಲ್ಲ. ಕಡೆಗೆ ಊರಿನ ಹೆಸರು ಬದಲಾಯಿಸುವುದೇ ಸೂಕ್ತ ಎನ್ನಿಸಿ ಗಾಂಧಿನಗರ ಎಂದು ಹೊಸದಾಗಿ ಮರುನಾಮಕರಣ ಮಾಡಿದ್ದೇವೆ" ಎಂದಿದ್ದಾರೆ. (ಏಜೆನ್ಸೀಸ್)