Don't Miss!
- News Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗೂ ಮುನ್ನ 10ಕೋಟಿ ಬಾಚಿದ ವರದನಾಯಕ
ಅದೇ ರೀತಿ ಸಂಗೊಳ್ಳಿ ರಾಯಣ್ಣ ಸಿನಿಮಾ ರಿಲೀಸ್ ಆದ ಮೇಲೂ ಕೋಟಿ ಕೋಟಿ ಕಮಾಯ್ ಮಾಡುತ್ತಿರುವುದನ್ನೂ ಅಲ್ಲಗಳೆಯುವಂತಿಲ್ಲ. ಕನ್ನಡ ಸಿನಿಮಾವನ್ನು ಅದ್ದೂರಿ ತಾರಾಗಣದಲ್ಲಿ ತೆಗೆದರೆ ಕೋಟಿ ಲೆಕ್ಕದಲ್ಲಿ ದುಡ್ಡು ಮಾಡಬಹುದು ಎಂಬುದಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಇನ್ನೊಂದು ಬೇಕಿಲ್ಲ.
ಪರಿಸ್ಥಿತಿ ಹೀಗಿರುವಾಗ ಕನ್ನಡದ ಮಾರುಕಟ್ಟೆಯನ್ನು ಮತ್ತಷ್ಟು ಹಿಗ್ಗಿಸಲು ಸುದೀಪ್-ಚಿರಂಜೀವಿ ಸರ್ಜಾ ಅಭಿನಯದ ವರದನಾಯಕ ಕೂಡ ಸಜ್ಜಾದಂತಿದೆ.
ಈಗಷ್ಟೇ ಆಡಿಯೋ ರಿಲೀಸ್ ಮಾಡಿರುವ ಚಿತ್ರತಂಡ ಮುಂದಿನ ತಿಂಗಳ ಮೊದಲ ವಾರದಲ್ಲಿ ವರದನಾಯಕ ಚಿತ್ರವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ. ನಿರ್ಮಾಪಕ ಶಂಕರೇ ಗೌಡ ಸಿನಿಮಾ ರಿಲೀಸು ಆಗುವ ಮುನ್ನವೇ ಸೇಫ್ ಆಗಿರೋದು ವಿಶೇಷ.
ಈಗಾಗಲೇ ಬಿಕೆಟಿ (ಬೆಂಗಳೂರು, ಕೋಲಾರ, ತುಮಕೂರು) ಏರಿಯಾವನ್ನು 3.5ಕೋಟಿ, ಮೈಸೂರು 1.5ಕೋಟಿ, ಹುಬ್ಬಳ್ಳಿ 1.5ಕೋಟಿ, ಸಣ್ಣ ಪುಟ್ಟ ಏರಿಯಾಗಳಿಂದ ಸುಮಾರು 2 ಕೋಟಿಗೂ ಹೆಚ್ಚು ಮೊತ್ತಕ್ಕೆ ಚಿತ್ರದ ರೈಟ್ಸ್ ಅನ್ನು ಸೇಲ್ ಮಾಡಿದ್ದಾರೆ.
ಇನ್ನು ಸ್ಯಾಟಿಲೈಟ್ ಹಕ್ಕನ್ನು ಸುವರ್ಣ ವಾಹಿನಿ 2.25 ಕೋಟಿ ಮೊತ್ತಕ್ಕೆ ಖರೀದಿಸಿದೆ. ಇದಷ್ಟೇ ಅಲ್ಲದೇ ಇನ್ನೂ ಮೂರು ಪ್ರಮುಖ ಏರಿಯಾಗಳನ್ನು ಸೇಲ್ ಮಾಡದೇ ತನ್ನಲ್ಲೇ ಉಳಿಸಿಕೊಂಡಿದ್ದಾರೆ ನಿರ್ಮಾಪಕ ಶಂಕರೇ ಗೌಡ.
ಸುಮಾರು ಎಂಟು ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ವರದನಾಯಕ ಚಿತ್ರ ನಿರ್ಮಾಪಕ ಶಂಕರೇ ಗೌಡರಿಗೆ ಇನ್ನೊಂದು 'ಕೆಂಪೇಗೌಡ' ಆಗುವ ಎಲ್ಲಾ ಲಕ್ಷಣಗಳು ತೋರಿಬರುತ್ತಿದೆ.
ಈ ಚಿತ್ರದ ಫೋಟೋ ಗ್ಯಾಲರಿಗಾಗಿ ಇಲ್ಲಿ ಕ್ಲಿಕ್ಕಿಸಿ