Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪೇಂದ್ರ 'ಕಲ್ಪನ' ಯಶಸ್ವಿ ಅರ್ಧ ಶತಕ ನಾಟೌಟ್
'ಕಲ್ಪನ' ಚಿತ್ರತಂಡ ಈ ಸಡಗರ, ಸಂಭ್ರಮದಲ್ಲಿ ತೇಲಾಡುತ್ತಿದೆ. ತೆಲುಗು, ತಮಿಳಿನ ಯಶಸ್ವಿ ಚಿತ್ರ 'ಕಾಂಚನ' ರೀಮೇಕ್ ಆದ 'ಕಲ್ಪನ' ಚಿತ್ರ 25 ಚಿತ್ರಮಂದಿರಗಳಲ್ಲಿ 50 ದಿನ ಪೂರೈಸಿದೆ. ಬೆಂಗಳೂರಿನ ಸ್ವಪ್ನ ಚಿತ್ರಮಂದಿರದಲ್ಲಿ ಈಗಲೂ 'ಕಲ್ಪನ' ಚಿತ್ರ ಯಶಸ್ಚಿ ಪ್ರದರ್ಶನ ಕಾಣುತ್ತಿದ್ದು ಉಪ್ಪಿ ಅಭಿನಯ ಎಲ್ಲರನ್ನೂ ಸೆಳೆಯುತ್ತಿದೆ.
ಉಪೇಂದ್ರ ಅಭಿನಯದ 'ಗಾಡ್ ಫಾದರ್' ಚಿತ್ರ ಅದ್ಯಾಕೋ ಏನೋ ಅರ್ಧ ಶತಕ ಬಾರಿಸುವಲ್ಲಿ ತಿಣುಕಾಡಬೇಕಾಯಿತು. ಆದರೆ 'ಕಠಾರಿವೀರ ಸುರಸುಂದರಾಂಗಿ' ಚಿತ್ರ 75 ದಿನ ಪ್ರದರ್ಶನ ಕಂಡಿದೆ. 'ಕಲ್ಪನ' ಚಿತ್ರದ ನಿರ್ಮಾಪಕ ಫುಲ್ ಸೇಫ್ ಆಗಿರುವುದಷ್ಟೇ ಅಲ್ಲ ಲಾಭದ ಫಸಲನ್ನೂ ಕಂಡಿದ್ದಾರೆ.
ಚಿತ್ರದ ಸ್ಯಾಟಲೈಟ್ ಹಕ್ಕುಗಳಿಂದಲೇ ರು.1.75 ಕೋಟಿ ವಸೂಲಿಯಾಗಿದೆ. ಚಿತ್ರದ ಒಟ್ಟಾರೆ ಕಲೆಕ್ಷನ್ ರು.6 ಕೋಟಿ ಎನ್ನುತ್ತವೆ ಮೂಲಗಳು. ಚಿತ್ರಕ್ಕೆ ಹೂಡಿರುವ ಬಂಡವಾಳ ರು.4 ಕೋಟಿಗೆ ಹೋಲಿಸಿದರೆ 'ಕಲ್ಪನ' ಚಿತ್ರ ನಿರ್ಮಾಪಕರಿಗೆ ಪಾಲಿಗೆ ಲಾಟರಿ ಹೊಡೆದಂತಾಗಿದೆ.
ಮೈಸೂರು, ಉತ್ತರ ಕರ್ನಾಟಕ, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೂಪರ್ ಹಿಟ್ ಆಗಿದ್ದು ರಾಜ್ಯದ ಉಳಿದೆಡೆ ಹಿಟ್ ಚಿತ್ರವಾಗಿ ಡಿಕ್ಲೇರ್ ಆಗಿದೆ. ಈ ಚಿತ್ರದ ಪಾತ್ರವರ್ಗದಲ್ಲಿ ಲಕ್ಷ್ಮಿ ರೈ, ಸಾಯಿಕುಮಾರ್, ಶ್ರುತಿ ಹಾಗೂ ಉಮಾಶ್ರೀ ಅಭಿನಯಿಸಿದ್ದಾರೆ. ಸುದೀರ್ಘ ಸಮಯದ ಬಳಿಕ ಈ ಚಿತ್ರದ ಮೂಲಕ ಸಾಯಿಕುಮಾರ್ ಮತ್ತೊಮ್ಮೆ ಕನ್ನಡಕ್ಕೆ ಅಡಿಯಿಟ್ಟದ್ದು ವಿಶೇಷ. (ಏಜೆನ್ಸೀಸ್)