Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಕೃತಕಾಮಿ 'ಉಮೇಶ್ ರೆಡ್ಡಿ' ಚಿತ್ರದ ಫಸ್ಟ್ ಲುಕ್
ಕನ್ನಡ ಚಿತ್ರೋದ್ಯಮ ನೈಜ ಘಟನೆ ಆಧಾರಿತ ಚಿತ್ರಗಳ ಕಡೆಗೆ ಹೆಚ್ಚು ಒಲವು ತೋರಿಸುತ್ತಿರುವಂತಿದೆ. ನೈಜ ಘಟನೆಗಳನ್ನು ಆಧರಿಸಿ ಹೊಸ ಹೊಸ ಕಥೆಗಳನ್ನು ಹೆಣೆದು ರೀಲು ಸುತ್ತಲಾಗುತ್ತಿದೆ. ಕೆಲವು ಚಿತ್ರಗಳು ಸದ್ದು ಮಾಡುತ್ತಿವೆ. ಈಗ ಅಂತಹದ್ದೇ ಒಂದು ಪ್ರಯತ್ನಕ್ಕೆ ಕೈ ಹಾಕಿದ್ದಾರೆ ನಿರ್ದೇಶಕ ಸಾಯಿಕೃಷ್ಣ.
ಅವರು ಕೈಗೆತ್ತಿಕೊಂಡಿರುವ ಚಿತ್ರದ ಹೆಸರು 'ಉಮೇಶ್ ರೆಡ್ಡಿ'. ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ವಿಕೃತಕಾಮಿಯೊಬ್ಬನ ಕಥೆಯನ್ನು ಅವರು ಬೆಳ್ಳಿತೆರೆಗೆ ತರುತ್ತಿದ್ದಾರೆ. ಇದಕ್ಕಾಗಿ ಅವರು ಅವರು ಹಲವಾರು ತಿಂಗಳುಗಳ ಕಾಲ ಶ್ರಮಿಸಿ ಕಥೆಯನ್ನು ಹೆಣೆದಿದ್ದಾರೆ.
ಅಂದಹಾಗೆ ಉಮೇಶ್ ರೆಡ್ಡಿ ಹುಟ್ಟಿ ಬೆಳೆದದ್ದೆಲ್ಲಾ ಚಿತ್ರದುರ್ಗದಲ್ಲಿ. ಹಾಗಾಗಿ ನಿರ್ದೇಶಕರು ಅಲ್ಲೇ ಮುಹೂರ್ತ ನೆರವೇರಿಸಿದ್ದರು. ಹಾಗೆಯೇ ಆತ ಎಲ್ಲೆಲ್ಲಿ ಅಪರಾಧಗಳನ್ನು ಎಸೆದಿದ್ದಾನೋ ಅಲ್ಲಲ್ಲೇ ಚಿತ್ರೀಕರಿಸುವುದಾಗಿಯೂ ತಿಳಿಸಿದ್ದಾರೆ.
ಉಮೇಶ್ ರೆಡ್ಡಿಯ ಅಪರಾಧಗಳ ಜಾಡನ್ನು ಹುಡುಕುತ್ತಾ ಹೊರಟರೆ ಕಾಶ್ಮೀರ, ಪುಣೆಯಲ್ಲೂ ಚಿತ್ರೀಕರಣ ಮಾಡಬೇಕಾಗುತ್ತದೆ. ತಾವು ಅದಕ್ಕೂ ಸಿದ್ಧ ಎನ್ನುತ್ತಾರೆ ಚಿತ್ರದ ನಿರ್ಮಾಪಕ ರಮೇಶ್. ಚಿತ್ರದ ಪ್ರಮುಖ ಪಾತ್ರದಲ್ಲಿ ರೂಪಿಕಾ ಅಭಿನಯಿಸುತ್ತಿದ್ದಾರೆ. (ಏಜೆನ್ಸೀಸ್)