Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೆಚ್ಚಿನ ಚಿತ್ರಮಂದಿರಗಳಲ್ಲಿ ಕಾಮಿಡಿ ಚಿತ್ರ 'ಪರಾರಿ'
ಈ ವರ್ಷದ ಬಹುನಿರೀಕ್ಷಿತ ಚಿತ್ರ ಅಲ್ಲದಿದ್ದರೂ 'ಪರಾರಿ' ಚಿತ್ರ ಕುತೂಹಲವನ್ನಂತೂ ಕೆರಳಿಸಿದೆ. ಇದಕ್ಕೆ ಕಾರಣವಾಗಿರುವುದು ಚಿತ್ರದ ನಿರ್ದೇಶಕ ಕೆ.ಎಂ.ಚೈತನ್ಯ. ಬಹಳಷ್ಟು ಗ್ಯಾಪ್ ನ ಬಳಿಕ ಅವರು ಪರಾರಿ ಚಿತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.
ಈ ಬಾರಿ ಅವರ ಸಬ್ಜೆಕ್ಟ್ ಕಾಮಿಡಿ ಆಗಿರುವ ಕಾರಣ ಪ್ರೇಕ್ಷಕರು ಗಂಭೀರ ನೋಟ ಹರಿಸಿದ್ದಾರೆ. ಹರೆಯದ ಹೃದಯ ಯಾರಿಗೆ ಇದೆಯೋ ಅಂಥಹವರಿಗೆ ತಮ್ಮ ಚಿತ್ರ ಎಂದಿದ್ದಾರೆ ಚಿತ್ರದ ನಿರ್ದೇಶಕರು. ಈ ಚಿತ್ರದ ಮೂಲಕ ಮೇಘನಾ ನಾಯ್ಡು ಐಟಂ ಬೆಡಗಿಯಾಗಿ ಕನ್ನಡಕ್ಕೆ ಅಡಿಯಿಡುತ್ತಿದ್ದಾರೆ.
'ಆ ದಿನಗಳು', 'ಸೂರ್ಯಕಾಂತಿ' ಚಿತ್ರಗಳ ನಂತರ ಕೆ.ಎಂ.ಚೈತನ್ಯ ನಿರ್ದೇಶಿಸಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಚ್.ಸಿ.ವೇಣು ಛಾಯಾಗ್ರಹಣ, ಹರಿದಾಸ್ ಕೆ.ಜಿ.ಎಫ್ ಸಂಕಲನ, ಹರ್ಷ ನೃತ್ಯ ನಿರ್ದೇಶನ, ರವಿವರ್ಮ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ, ಅರುಣ್ ಸಾಗರ್ ಕಲಾನಿರ್ದೇಶನದ 'ಪರಾರಿ'ಗೆ ಎಸ್.ಮೋಹನ್ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ಚಿತ್ರದಲ್ಲಿ ಭರಪೂರ ಮನರಂಜನೆ ಇದೆ. 16ರಿಂದ 22ರ ವಯೋಮಾನದ ಯುವಕರ ಕತೆ ಇದು. ಎರಡೂವರೆ ಗಂಟೆಗಳ ಎಲ್ಲರೂ ನಕ್ಕು ನಗಿಸಲಿದ್ದಾರೆ. ಚಿತ್ರದಲ್ಲಿ ವಿಲನ್ ಸಹ ನಗಿಸುತ್ತಾನೆ. ಯುವಕರ ಕನಸು, ಕಷ್ಟ ಸುಖಗಳನ್ನು ಕಾಮಿಡಿ ಮೂಲಕ ಹೇಳಲು ಪ್ರಯತ್ನಿಸಿದ್ದೇವೆ ಎಂದಿದ್ದಾರೆ ಚೈತನ್ಯ. (ಒನ್ಇಂಡಿಯಾ ಕನ್ನಡ)