Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಿಲಂ ಚೇಂಬರ್ ನಲ್ಲೂ 'ನೀರ್ ದೋಸೆ' ಬೇಯಲಿಲ್ಲ
ರಮ್ಯಾ ಹಾಗೂ ನವರಸ ನಾಯಕ ಜಗ್ಗೇಶ್ ಮುಖ್ಯಭೂಮಿಕೆಯಲ್ಲಿರುವ 'ನೀರ್ ದೋಸೆ' ವಿವಾದ ಇನ್ನಷ್ಟು ಬಿಗಡಾಯಿಸಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಬುಧವಾರ (ನ.6) ನಡೆದ ಸಂಧಾನಸಭೆಗೆ ರಮ್ಯಾ ಗೈರುಹಾಜರಾಗುವ ಮೂಲಕ ಸಭೆಯನ್ನು ಮುಂದೂಡಲಾಯಿತು.
ಫಿಲಂ ಚೇಂಬರ್ ಅಧ್ಯಕ್ಷ ಎಚ್ ಡಿ ಗಂಗರಾಜು ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಗೆ ರಮ್ಯಾ ಹಲವಾರು ಕಾರಣಗಳಿಂದ ಹಾಜರಾಗಲು ಸಾಧ್ಯವಾಗಲಿಲ್ಲ. ಸಭೆಯಲ್ಲಿ 'ನೀರ್ ದೋಸೆ' ನಿರ್ಮಾಪಕ ಸುಧೀಂದ್ರ ಅವರು ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ತಲಾ ಹತ್ತು ದಿನಗಳ ಡೇಟ್ ನೀಡುವಂತೆ ಪಟ್ಟು ಹಿಡಿದರು.
ಸಲಹಾ ಸಮಿತಿಯ ಸದಸ್ಯರೂ ಆದ ಅಂಬರೀಶ್ ಮಾತನಾಡಿ 'ನೀರ್ ದೋಸೆ' ವಿವಾದಕ್ಕೆ ನವೆಂಬರ್ 25ರಂದು ಅಂತ್ಯ ಹಾಡುತ್ತೇವೆ. ಖಂಡಿತ ಈ ಸಮಸ್ಯೆ ಬಗೆಹರಿಯುತ್ತದೆ ಎಂಬ ವಿಶ್ವಾಸವನ್ನು ಗಂಗರಾಜು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.
ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಮುನಿರತ್ನ ಅವರು ಮಾತನಾಡುತ್ತಾ, "ರಮ್ಯಾ ಅವರು ನವೆಂಬರ್ 24ರಂದು ಸಭೆಗೆ ಹಾಜರಾಗುತ್ತೇನೆ ಎಂದರು. ಆದರೆ ಅಂದು ಭಾನುವಾರವಾದ ಕಾರಣ ನವೆಂಬರ್ 25ಕ್ಕೆ ಸಭೆಯನ್ನು ಕರೆದಿದ್ದೇವೆ. ಅಂದು ನಿರ್ಮಾಪಕರ ಸಂಘ, ನಿರ್ದೇಶಕರ ಸಂಘ, ಕಲಾವಿದರ ಸಂಘದ ಅಧ್ಯಕ್ಷರು, ಫಿಲಂ ಚೇಂಬರ್ ಪದಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ" ಎಂದರು.
ರಮ್ಯಾ ಅವರ ಜೊತೆ ಮಾತನಾಡಿದಾಗ ಅವರು, "ನನ್ನ ಲೋಕಸಭಾ ಕ್ಷೇತ್ರ ಬಹಳ ದೊಡ್ಡದಾಗಿರುವ ಕಾರಣ, ಇಲ್ಲಿ ಜನರ ಸಂಕಷ್ಟಗಳು ಸಾಕಷ್ಟಿವೆ. ನನಗೂ ಚಿತ್ರೀಕರಣದಲ್ಲಿ ಭಾಗವಹಿಸಬೇಕೆಂಬ ಆಸೆ ಇದೆ. ಆದರೆ ಸಾಧ್ಯವಾಗುತ್ತಿಲ್ಲ" ಎಂದು ರಮ್ಯಾ ತಿಳಿಸಿದ್ದಾಗಿ ಮುನಿರತ್ನ ವಿವರ ನೀಡಿದರು. ನವೆಂಬರ್ 25ರಂದು ಸಭೆಗೆ ಹಾಜರಾಗುವಂತೆ ಅವರಿಗೆ ಪತ್ರ ಬರೆಯಲಾಗುತ್ತಿದೆ ಎಂದರು. (ಒನ್ಇಂಡಿಯಾ ಕನ್ನಡ)