Don't Miss!
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬರಗೂರು ರಾಮಚಂದ್ರಪ್ಪ ಪ್ರಶಸ್ತಿ ನಿರಾಕರಿಸಿದ್ದೇಕೆ?
ಸಾಮಾನ್ಯವಾಗಿ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾದಾಗ ಪ್ರತಿ ಬಾರಿಯೂ ಒಂದಿಲ್ಲೊಂದು ಸಮಸ್ಯೆಗಳು, ವಿವಾದಗಳು ತಪ್ಪಿದ್ದಲ್ಲ. ಕೆಲವರು ತಮಗೆ ಪ್ರಶಸ್ತಿ ಸಿಗಲಿಲ್ಲ ಎಂದು ಕ್ಯಾತೆ ತೆಗೆದರೆ, ಇನ್ನೂ ಕೆಲವರು ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸುವುದು ಸಾಮಾನ್ಯ.
ಆದರೆ ಪ್ರಶಸ್ತಿ ನಿರಾಕರಿಸುವಂತಹ ಸಾಹಸಕ್ಕೆ ಯಾರೂ ಕೈಹಾಕುತ್ತಿರಲಿಲ್ಲ. ಈ ರೀತಿಯ ಬೆಳವಣಿಗೆಗಳು ಅಪರೂಪ ಎಂಬಂತಿದ್ದವು. ಇದೀಗ ಡಾ.ಬರಗೂರು ರಾಮಚಂದ್ರಪ್ಪನವರು ತಮ್ಮ 'ಅಂಗುಲಿಮಾಲ' ಚಿತ್ರಕ್ಕೆ ಒಲಿದಿದ್ದ ಶ್ರೇಷ್ಠ ಕಥೆ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. [ರಾಜ್ಯ ಪ್ರಶಸ್ತಿ: ಶ್ರೇಷ್ಠ ನಟ ದರ್ಶನ್, ನಟಿ ನಿರ್ಮಲಾ]
ಪುರಾಣದ ಕಥೆಗೆ ತಮ್ಮದೇ ಆದಂತಹ ಪುನರ್ ವ್ಯಾಖ್ಯಾನ ನೀಡಿದ್ದೇವೆ. ವಿವಿಧ ಆಕರಗಳಿಗೆ ಸಂಬಂಧಿಸಿದ ಕಥೆಗೆ ನಾನು ಪ್ರಶಸ್ತಿ ಪಡೆಯುವುದು ನೈತಿಕವಾಗಿ ಸರಿಯಲ್ಲ. ಹಾಗಾಗಿ ನಿರಾಕರಿಸಿದ್ದೇನೆ ಎಂದು ಹೇಳಿದ್ದಾರೆ.
ಕಥಾ ವಿಭಾಗದಲ್ಲಿ ಪ್ರಶಸ್ತಿಗೆ ತಮ್ಮನ್ನು ಪರಿಗಣಿಸಿದ್ದಕ್ಕೆ ಕೃತಜ್ಞತೆಗಳನ್ನು ತಿಳಿಸಿರುವ ಅವರು ಅಷ್ಟೇ ವಿನಯಪೂರ್ವಕವಾಗಿ ನಿರಾಕರಿಸುತ್ತಿರುವುದಾಗಿ ತಿಳಿಸಿದ್ದಾರೆ. ಅಂದಹಾಗೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿಯು ಇಪ್ಪತ್ತು ಸಾವಿರ ರುಪಾಯಿಗಳ ನಗದು ಮತ್ತು ಬೆಳ್ಳಿಯ ಪದಕವನ್ನು ಒಳಗೊಂಡಿದೆ.