Don't Miss!
- News ನೇಹಾ ಕೊಲೆ ಕೇಸ್ ಸಿಐಡಿಗೆ ಹಸ್ತಾಂತರ: ಇಂದು ಫಯಾಜ್ ವಶಕ್ಕೆ ಸಾಧ್ಯತೆ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾನೂನು ಸಮರದಲ್ಲಿ ಗೆದ್ದ 'ಅಭಿನೇತ್ರಿ' ಪೂಜಾಗಾಂಧಿ
ಮಳೆ ಹುಡುಗಿ ಪೂಜಾಗಾಂಧಿ ಕಾನೂನು ಸಮರದಲ್ಲಿ ಗೆದ್ದಿದ್ದಾರೆ. ಕಡೆಗೂ ತಮ್ಮ ಮಹತ್ವಾಕಾಂಕ್ಷಿ ಚಿತ್ರ ಅಭಿನೇತ್ರಿಯನ್ನು ತೆರೆಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೃತಿಚೌರ್ಯ ವಿವಾದದ ಕಾರಣ 'ಅಭಿನೇತ್ರಿ' ಚಿತ್ರ ಕೋರ್ಟ್ ಮೆಟ್ಟಿಲೇರಿತ್ತು.
ಇದೀಗ ಚಿತ್ರ ಬಿಡುಗಡೆಗೆ ಸಿಟಿ ಸಿವಿಲ್ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ. ಕಳೆದ ಮೂರು ತಿಂಗಳಿಂದ ಪೂಜಾಗಾಂಧಿ ಈ ಚಿತ್ರದ ಬಿಡುಗಡೆಗಾಗಿ ಕೋರ್ಟ್ ಗೆ ಸಾಕಷ್ಟು ಅಲೆದಾಡಿದ್ದರು. ಇದೀಗ ಅವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ['ಅಭಿನೇತ್ರಿ' ಪೂಜಾಗಾಂಧಿ ಮೇಲೆ ಕಥೆ ಕದ್ದ ಆರೋಪ]
ಬಳಿಕ ಎರಡನ್ನೂ ತಾಳೆಮಾಡಿ ನೋಡಿದಾಗ ಅಭಿನೇತ್ರಿಯ ಅಂತರಂಗ ಕೃತಿಗೂ ಅಭಿನೇತ್ರಿ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದಾರೆ. ಅಲ್ಲಿಗೆ 'ಅಭಿನೇತ್ರಿ' ಚಿತ್ರದ ವಿವಾದ ಇತ್ಯರ್ಥ್ಯಗೊಂಡಿದೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪೂಜಾಗಾಂಧಿ, ನಾವು ಯಾವುದೇ ಕಥೆ ಕದ್ದಿಲ್ಲ. ಭಾಗ್ಯ ಕೃಷ್ಣಮೂರ್ತಿ ಅವರ ಕೃತಿಗೂ ನಮ್ಮ ಚಿತ್ರಕಥೆಗೂ ಯಾವುದೇ ಸಂಬಂಧ ಇರಲಿಲ್ಲ. ನ್ಯಾಯಾಲಯದ ಮೇಲೆ ನನಗೆ ಅಪಾರ ನಂಬಿಕೆ ಇತ್ತು ಎಂದು ಅವರು ಹೇಳಿದ್ದಾರೆ.
ಶೀಘ್ರದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿಗೆ ಕಳುಹಿಸಲಿದ್ದು, ಇದೇ ತಿಂಗಳಾಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವುದಾಗಿ ಪೂಜಾಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಳಿದಂತೆ ಚಿತ್ರದ ಪ್ರಚಾರಕಾರ್ಯ ಭರದಿಂದ ಸಾಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.