Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಜಿಸ್ಟಾರ್ ರವಿಚಂದ್ರನ್ ಈಗ ಶೃಂಗಾರ ರಾಮ
ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೂ ಶೃಂಗಾರಕ್ಕೂ ದ್ರಾಕ್ಷಿಗೂ ಬಳ್ಳಿಗೂ ಇರುವ ಸಂಬಂಧ. ತೆರೆಯ ಮೇಲೆ ಅವರು ಅದೆಷ್ಟೋ ಹೆಂಗೆಳೆಯರ ಹೃದಯ ಕದ್ದ ಶೃಂಗಾರ ಪುರುಷ. ಅವರ ಚಿತ್ರಗಳಲ್ಲಿ ಶೃಂಗಾರಕ್ಕೆ ವಿಶೇಷ ಆದ್ಯತೆ ಇರುವುದು ಗೊತ್ತೇ ಇದೆ. ಇದೀಗ ಅವರು 'ಶೃಂಗಾರ ರಾಮ'ನಾಗಿ ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗುತ್ತಿದ್ದಾರೆ.
ಸತತ ಸೋಲುಗಳಿಂದ ಕಂಗೆಟ್ಟಿ ರವಿಚಂದ್ರನ್ ಅವರು 'ಕ್ರೇಜಿಸ್ಟಾರ್' ಚಿತ್ರದ ಮೂಲಕ ಮತ್ತೆ ಫೀನಿಕ್ಸ್ ಪಕ್ಷಿಯಂತೆ ಎದ್ದು ಬಂದಿದ್ದಾರೆ. ಈ ಚಿತ್ರದ ಗೆಲುವು ಅವರನಲ್ಲಿ ಇನ್ನಷ್ಟು ಹೊಸ ಚೈತನ್ಯ ತುಂಬಿದೆ. ಈಗವರು ಸಾಕಷ್ಟು ಚಿತ್ರಗಳಲ್ಲಿ ಬಿಜಿಯಾಗಿದ್ದಾರೆ. ಮಲಯಾಳಂನ 'ದೃಶ್ಯಂ' ಚಿತ್ರವನ್ನು ಕನ್ನಡಕ್ಕೆ ತರುತ್ತಿದ್ದಾರೆ. ಪಿ.ವಾಸು ಆಕ್ಷನ್ ಕಟ್ ಹೇಳಿತ್ತಿರುವ ಚಿತ್ರ ಇದಾಗಿದೆ. [ಕ್ರೇಜಿಸ್ಟಾರ್ ಚಿತ್ರವಿಮರ್ಶೆ]
'ಕ್ರೇಜಿಸ್ಟಾರ್' ಚಿತ್ರ ರವಿಚಂದ್ರನ್ ಅವರನ್ನು ಮತ್ತೆ ಟ್ರ್ಯಾಕ್ ಗೆ ಬರುವಂತೆ ಮಾಡಿದೆ. ಇದೀಗ ಅವರು ನಲ್ಲ ಸುದೀಪ್ ಜೊತೆಗಿನ 'ಮಾಣಿಕ್ಯ' ಚಿತ್ರದಲ್ಲಿ ತಂದೆಯ ಪಾತ್ರವನ್ನು ಪೋಷಿಸುತ್ತಿದ್ದಾರೆ. ಇದೀಗ ಶೃಂಗಾರ ರಾಮನಾಗುತ್ತಿದ್ದಾರೆ. ಚಿತ್ರ ಏಪ್ರಿಲ್ ನಲ್ಲಿ ಸೆಟ್ಟೇರಲಿದೆ ಎಂಬುದು ಸದ್ಯದ ಮಾಹಿತಿ. (ಏಜೆನ್ಸೀಸ್)