Don't Miss!
- Sports ಕಮಿನ್ಸ್ ಟೆನ್ಷನ್ ಹೆಚ್ಚಿಸಿದ ಸ್ಟಾರ್ ಪ್ಲೇಯರ್ ನಿರ್ಧಾರ: ಎಸ್ಆರ್ಎಚ್ ತಂಡಕ್ಕೆ ಆರಂಭದಲ್ಲೇ ಪೆಟ್ಟು
- Lifestyle ಪಳ ಪಳ ಹೊಳೆಯುವ ಕೆಂಪು ನಾಗರ ನೋಡಿದ್ದೀರಾ..? ವೈರಲ್ ಆಗ್ತಿದೆ ವಿಡಿಯೋ..!
- Technology ಬಹುನಿರೀಕ್ಷಿತ ರಿಯಲ್ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್ಬಡ್ಸ್ ಉಚಿತ!
- News ಜಗದೀಶ್ ಶೆಟ್ಟರ್ಗೆ ಬೆಳಗಾವಿ ಸ್ಪರ್ಧೆ ಮತ್ತಷ್ಟು ಜಟೀಲ: ಗೋಬ್ಯಾಕ್ ಅಭಿಯಾನ ಯಶಸ್ವಿ ಆಯ್ತಾ?
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾರ್ತಾ ಇಲಾಖೆಯಿಂದ ರಾಜ್ ಜನ್ಮ ದಿನಾಚರಣೆ
ಬೆಂಗಳೂರು, ಏಪ್ರಿಲ್ 23: ವರನಟ, ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತ ಡಾ.ರಾಜ್ ಕುಮಾರ್ ಅವರ 86ನೇ ಹುಟ್ಟುಹಬ್ಬನ್ನು ಅದ್ದೂರಿಯಾಗಿ ಆಚರಿಸಲು ವಾರ್ತಾ ಇಲಾಖೆ ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಏಪ್ರಿಲ್ 24 ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ವಾರ್ತಾ ಇಲಾಖೆ ವಿಜೃಂಭಣೆಯಿಂದ ಆಚರಿಸಲಿದೆ ಎಂದು ರಾಜ್ಯ ವಾರ್ತಾ ಇಲಾಖೆಯ ನಿರ್ದೇಶಕ ಎನ್. ಆರ್. ವಿಶುಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅದೇ
ದಿನ
ಸಂಜೆ
6-15
ಗಂಟೆಗೆ
ಜ್ಞಾನಪೀಠ
ಪ್ರಶಸ್ತಿ
ಪುರಸ್ಕೃತ
ಹಾಗೂ
ಖ್ಯಾತ
ಸಾಹಿತಿ
ಡಾ.
ಚಂದ್ರಶೇಖರ್
ಕಂಬಾರ
ಅವರು
ಈ
ಸಮಾರಂಭವನ್ನು
ಉದ್ಪಾಟಿಸಲಿದ್ದಾರೆ.
ಹಿರಿಯ
ಚಿತ್ರೋದ್ಯಮಿ
ಪಾರ್ವತಮ್ಮ
ರಾಜ್ಕುಮಾರ್
ಅವರು
ಅಧ್ಯಕ್ಷತೆ
ವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಹಿರಿಯ ಚಲನಚಿತ್ರ ಅಭಿನೇತ್ರಿ ಸಾಹುಕಾರ್ ಜಾನಕಿ, ಸಾರಿಗೆ, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಪಿ. ಎನ್. ಶ್ರೀನಿವಾಸಚಾರಿ ಅವರು ಪಾಲ್ಗೊಳ್ಳಲಿದ್ದಾರೆ.
ಅಂದು ಸಂಜೆ 5.30 ಗಂಟೆಗೆ ಪ್ರಕಾಶ್ ಶೆಟ್ಟಿ ಮತ್ತು ತಂಡದವರಿಂದ ರಂಗ ಗೀತೆಗಳು, ಸಂಜೆ 6.00 ಗಂಟೆಗೆ ಡಾ ರಾಜ್ಕುಮಾರ್ ಅಭಿನಯಿಸಿದ ಜನಪ್ರಿಯ ಚಿತ್ರಗಳಿಂದ ಆಯ್ದ ಚಿತ್ರ ತುಣುಕು ಪ್ರದರ್ಶನ ಹಾಗೂ ಸಂಜೆ 7.00 ಗಂಟೆಗೆ ಖ್ಯಾತ ಸಂಗೀತ ನಿರ್ದೇಶಕ ಹರಿಕೃಷ್ಣ ಮತ್ತು ವಾಣಿ ಹರಿಕೃಷ್ಣ ತಂಡದವರಿಂದ ಡಾ ರಾಜ್ ರಾಗಮಾಲಿಕಾ ಕಾರ್ಯಕ್ರಮವೂ ಸೇರಿದಂತೆ ಸಮಾರಂಭದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. (ಒನ್ಇಂಡಿಯಾ ಕನ್ನಡ)