Don't Miss!
- News ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದರು; ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಿನ್ನಿಸ್ ದಾಖಲೆಯತ್ತ ಸಾಹಸಸಿಂಹ 'ಖೈದಿ' ಕಟೌಟ್
ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಚಿತ್ರಗಳನ್ನು ಇಂದಿಗೂ ಅವರ ಅಭಿಮಾನಿಗಳು ಮುಗಿಬಿದ್ದು ನೋಡುತ್ತಾರೆ ಎಂಬುದಕ್ಕೆ ಇತ್ತೀಚೆಗೆ ತೆರೆಕಂಡ ಅವರ ಹಳೆಯ ಚಿತ್ರ 'ಖೈದಿ' ಸಾಕ್ಷಿ. ಈ ಚಿತ್ರ ಬಾಕ್ಸ್ ಆಫೀಸಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತ್ರಿವೇಣಿ ಚಿತ್ರಮಂದಿರದಲ್ಲಿ ಕಲೆಕ್ಷನ್ ಇನ್ನೂ ನಯಾಪೈಸೆಯಷ್ಟೂ ಕಡಿಮೆಯಾಗಿಲ್ಲ.
ಇದೀಗ ವಿಷ್ಣು ಅಭಿಮಾನಿಗಳಿಗೆ ಇಷ್ಟವಾದ ಮತ್ತೊಂದು ಸುದ್ದಿ ಬಂದಿದೆ. ಅದೇನೆಂದರೆ ತ್ರಿವೇಣಿ ಚಿತ್ರಮಂದಿರದ ಮುಂದೆ ನಿಲ್ಲಿಸಿರುವ ಭಾರಿ ಕಟೌಟ್ ಈಗ ಗಿನ್ನಿಸ್ ಹಾಗೂ ಲಿಮ್ಕಾ ಬುಕ್ ಆಫ್ ರೆಕಾರ್ಡ್ ಗೆ ಶೀಘ್ರದಲ್ಲೇ ಸೇರ್ಪಡೆಯಾಗಲು ಸಿದ್ಧವಾಗಿದೆ. [ಸಾಹಸಸಿಂಹ ವಿಷ್ಣುವರ್ಧನ್ 'ಖೈದಿ' ರೀ ರಿಲೀಸ್]
ಈ ರೀತಿಯ ಪ್ರಶಸ್ತಿಗಗಳಿಗೆ ಏಕಕಾಲಕ್ಕೆ ಪಾತ್ರರಾಗುತ್ತಿರುವ ಮೊದಲ ನಟನಾಗಿ ವಿಷ್ಣುವರ್ಧನ್ ಅವರು ಹೊರಹೊಮ್ಮಿದ್ದಾರೆ. ಈಗಾಗಲೆ ಫೋಟೋ ಜರ್ನಲಿಸ್ಟ್ ಜನಾರ್ಧನ ರಾವ್ ಸಾಳಂಕೆ ಅವರು ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನೂ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್, ಲಂಡನ್ ಹಾಗೂ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ , ಗುರಗಾಂವ್ ಗೆ ಕಳುಹಿಸಿದ್ದಾರೆ.
ಬೆಂಗಳೂರಿನ ಅಪರ್ಣಾ ಚಿತ್ರಮಂದಿರದಲ್ಲಿ ನವೆಂಬರ್ 15ರಂದು ಖೈದಿ ಚಿತ್ರ ಬಿಡುಗಡೆಯಾಗುತ್ತಿದೆ. ಕೆಎಸ್ ಆರ್ ದಾಸ್ ನಿರ್ದೇಶನದ ಈ ಚಿತ್ರವನ್ನು ಜಿಆರ್ ಕೆ ರಾಜು ಅವರು ವಿಶ್ವಚಿತ್ರ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದರು. ಚಿತ್ರ ಬಿಡುಗಡೆ ಕಂಡಿದ್ದು 1984ರಲ್ಲಿ.
ತೆಲುಗಿನ 'ಖೈದಿ' ಚಿತ್ರದ ರೀಮೇಕ್ ಇದು. ಮೂಲ ಚಿತ್ರದಲ್ಲಿ ಚಿರಂಜೀವಿ ಹಾಗೂ ಮಾಧವಿ ಮುಖ್ಯ ಪಾತ್ರಧಾರಿಗಳು. ಈ ಚಿತ್ರದ "ತಾಳೆ ಹೂವ ಪೊದೆಯಿಂದ..." (ಚಿ.ಉದಯಶಂಕರ್ ಸಾಹಿತ್ಯ) ಹಾಡು ಆಗಿನ ಕಾಲಕ್ಕೆ ಬುಸ್ ಬುಸ್ ಎಂದು ಸಾಕಷ್ಟು ಸದ್ದು ಮಾಡಿತ್ತು.
ಚಕ್ರವರ್ತಿ ಸಂಗೀತ, ವಿ ಲಕ್ಷ್ಮಣ್ ಅವರ ಛಾಯಾಗ್ರಹಣ, ಡಿ ವೆಂಕಟರತ್ನಂ ಅವರ ಸಂಕಲನ, ಚಿನ್ನಿ ಪ್ರಕಾಶ್ ಮತ್ತು ತಾರಾ ಅವರ ನೃತ್ಯ ಸಂಯೋಜನೆ, ನಾಗರಾಜ್ ಅವರ ಕಲೆ ಇರುವ ಚಿತ್ರವನ್ನು ಡಿವಿ ಸುಧೀಂದ್ರ ಅವರು ಪ್ರಚಾರ ಮಾಡಿದ್ದರು. ಈಗ ಮತ್ತೊಂದು ಬೆಳ್ಳಿತೆರೆಯ ಮೇಲೆ ವೀಕ್ಷಿಸುವ ಅವಕಾಶ. (ಒನ್ಇಂಡಿಯಾ ಕನ್ನಡ)