Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರರಂಗದ 60 ಸಾಧಕರಿಗೆ ಚೆನ್ನೈನಲ್ಲಿ ಸನ್ಮಾನ
ಈಗಾಗಲೆ ಕನ್ನಡ ಚಿತ್ರರಂಗದ ಹಲವಾರು ತಾರೆಗಳು ಸಮಾರಂಭಕ್ಕೆ ಮತ್ತಷ್ಟು ರಂಗು ತುಂಬಲು, ವೇದಿಕೆ ಮೇಲೆ ಹೆಜ್ಜೆ ಹಾಕಲು ಚೆನ್ನೈನೆಡೆಗೆ ಪ್ರಯಾಣ ಸಾಗಿಸಿದ್ದಾರೆ. ಕನ್ನಡ ಸೇರಿದಂತೆ ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದ ಗಣ್ಯರನ್ನೂ ಈ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತಿದೆ.
ಕನ್ನಡ ಚಿತ್ರರಂಗದ ಬಹುತೇಕ ಕಲಾವಿದರು, ತಂತ್ರಜ್ಞರು ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ 40ಕ್ಕೂ ಹೆಚ್ಚು ವರ್ಷಗಳ ಕಾಲ ಶ್ರಮಿಸಿ ಅದರ ಬೆಳವಣಿಗೆಗಾಗಿ ಶ್ರಮಿಸಿರುವ ಸಾಧಕರಿಗೆ ಶತಮಾನೋತ್ಸವ ಸಮಾರಂಭದಲ್ಲಿ ಗೌರವ ಸಲ್ಲಿಸಲಾಗುತ್ತಿದೆ.
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್, ನಟಿಯರಾದ ಲೀಲಾವತಿ, ಬಿ.ಸರೋಜಾದೇವಿ, ಭಾರತಿ ವಿಷ್ಣುವರ್ಧನ್, ನಟರಾದ ಅಂಬರೀಶ್, ಶಿವರಾಂ, ರವಿಚಂದ್ರನ್, ಶ್ರೀನಾಥ್, ದ್ವಾರಕೀಶ್, ಎಂ.ಎಸ್.ಉಮೇಶ್ ಅವರನ್ನು ಸನ್ಮಾನಿಸಲಾಗುತ್ತಿದೆ.
ಕನ್ನಡ ಚಿತ್ರರಂಗದ ನಿರ್ದೇಶಕರಾದ ಭಗವಾನ್, ರಾಜೇಂದ್ರ ಸಿಂಗ್ ಬಾಬು, ಕೆ.ಎಸ್.ಎಲ್.ಸ್ವಾಮಿ, ಗಿರೀಶ್ ಕಾಸರವಳ್ಳಿ, ನಿರ್ಮಾಪಕರಾದ ಕೆ.ಸಿ.ಎನ್. ಚಂದ್ರಶೇಖರ್, ಅಜಂತಾ ರಾಜು, ಲಹರಿ ವೇಲು ಮತ್ತಿತರನ್ನು ಸನ್ಮಾನಿಸಲಾಗುತ್ತಿದೆ. (ಏಜೆನ್ಸೀಸ್)