Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸನದಲ್ಲಿ ಮಣ್ಣಿನ ಮಗನ ವಿರುದ್ದ ಮಣ್ಣಿನ ಮಗಳು?
ನಟಿ ಶ್ರುತಿ ಅವರು ಕಳೆದ ವರ್ಷ ನಾನಾ ವೈಯಕ್ತಿಕ ಕಾರಣಗಳಿಂದಾಗಿ ಬಹಳಷ್ಟು ಸುದ್ದಿ ಮಾಡಿದವರು. ಶ್ರುತಿ ಅವರ ಎರಡನೇ ಮದುವೆಯನ್ನು ಕೌಟುಂಬಿಕ ನ್ಯಾಯಾಲಯ ಅಸಿಂಧುಗೊಳಿಸಿದ್ದು, ಬಳಿಕ ಅವರು ಪರಿತಪಿಸಿದ್ದು ಎಲ್ಲವನ್ನೂ ಅವರ ಅಭಿಮಾನಿಗಳು ನೋಡಿದ್ದರು.
ಈಗ ಶ್ರುತಿ ಅವರು ಆ ಎಲ್ಲಾ ಕಹಿ ಘಟನೆಗಳಿಂದ ಹೊರಬಂದಿದ್ದಾರೆ. ಹದಿನಾರನೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಾಗಿ ಅವರು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. [ಲೋಕಸಭೆ ಚುನಾವಣೆ ಅಖಾಡಕ್ಕೆ ರಂಗಾಯಣ ರಘು?]
ಇನ್ನು ಶ್ರುತಿ ಅವರ ತಾಯಿಯ ತವರೂರು ಹೊಳೆನರಸಿಪುರ. ದೇವೇಗೌಡರ ಹುಟ್ಟೂರು ಹೊಳೆನರಸಿಪುರ. ಇಬ್ಬರೂ ಹೊಳೆನರಸಿಪುರದವರು ಎಂಬುದನ್ನು ಬಿಟ್ಟರೆ ಇನ್ಯಾವುದೇ ವಿಚಾರದಲ್ಲೂ ಸಾಮ್ಯತೆ ಕಾಣುವುದಿಲ್ಲ. ಬಿಜೆಪಿ ಮುಖಂಡರು ಶ್ರುತಿ ಅವರ ಜೊತೆ ಈಗಾಗಲೆ ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆ ಎಂಬುದು ಲೇಟೆಸ್ಟ್ ಸಮಾಚಾರ.
ಕೊನೆಯ ಘಳಿಗೆಯಲ್ಲಿ ಬಿಜೆಪಿಯಿಂದ ಟಿಕೆಟ್ ಯಾರಿಗೆ ಸಿಗುತ್ತದೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಆದರೆ ಶ್ರುತಿ ಅವರ ಹೆಸರಂತೂ ಕೇಳಿಬಂದಿದೆ. ಒಟ್ಟಾರೆಯಾಗಿ ಶ್ರುತಿ ಅವರಿಗೆ ಸೀಟು ಸಿಕ್ಕಿ ಒಂದು ವೇಳೆ ಗೆದ್ದುಬಿಟ್ಟರೆ ಪವಾಡವೇ ನಡೆದುಬಿಡುತ್ತದೆ.