Don't Miss!
- News ಹನೂರು: ಮತದಾರರ ಪಟ್ಟಿಯಲ್ಲಿ ಹೆಸರಿಲ್ಲವೆಂದು ಬೀದಿಗಿಳಿದ ವ್ಯಕ್ತಿ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೈಜ ಘಟನೆಗಳ ಆಧಾರಿತ ಚಿತ್ರ 'ಗಾಂಧೀಜಿ ಕನಸು'
ನವಭಾರತ ನಿರ್ಮಾಣಕ್ಕಾಗಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರು ಹಲವಾರು ಕನಸುಗಳನ್ನು ಕಂಡಿದ್ದರು. ಶುಚಿತ್ವ ಶೌಚಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಅವರು ಕಂಡ ಪ್ರಮುಖ ಕನಸಾಗಿತ್ತು. ಆ ವಿಷಯವನ್ನು ಪ್ರಮುಖವಾಗಿಟ್ಟುಕೊಂಡು ಚಲನಚಿತ್ರವೊಂದು ನಿರ್ಮಾಣವಾಗಿದೆ.
ಈ ಹಿಂದೆ 7-8 ಚಿತ್ರಗಳಲ್ಲಿ ಅಭಿನಯಿಸಿರುವ ರಮೇಶ್.ಎಸ್.ಪರವಿ ನಾಯ್ಕರ್ ನಿರ್ಮಾಣದ ಜೊತೆ ನಿರ್ದೇಶನ ಮಾಡಿರುವ ಗಾಂಧೀಜಿ ಕನಸು ಚಿತ್ರವೀಗ ಬಿಡುಗಡೆಗೆ ಸಿದ್ಧವಾಗಿದೆ. ಗಾಂಧೀಜಿಯವರ ಚಳವಳಿ ಕಾಲದಲ್ಲಿ ಉತ್ತರ ಕರ್ನಾಟಕದಲ್ಲಿ ನಡೆದಂಥ ನೈಜ ಘಟನೆಗಳನ್ನು ಈ ಚಿತ್ರಕ್ಕೆ ಕಥಾ ವಸ್ತುವನ್ನಾಗಿ ಬಳಸಿಕೊಳ್ಳಲಾಗಿದೆ. ['ನವರಂಗಿ' ತಾರೆ ರೂಪಿಕಾ ಪಂಚರಂಗಿ ಚಿತ್ರಗಳು]
ಚಿತ್ರದಲ್ಲಿ ಸಚಿವರುಗಳಾದ ಎಸ್.ಆರ್.ಪಾಟೀಲ್, ಹೆಚ್.ಕೆ.ಪಾಟೀಲ್ ಹಾಗೂ ಮಾಜಿ ಸಚಿವ ಆರ್.ವಿ.ತಿಮ್ಮಾಪುರ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಎಸ್.ರಮೇಶ್, ರೂಪಿಕಾ, ಎಂ.ಎನ್.ಲಕ್ಷ್ಮೀದೇವಿ, ಬ್ಯಾಂಕ್ ಜನಾರ್ಧನ್, ಎಂ.ಎಸ್.ಉಮೇಶ್, ಹೊನ್ನವಳ್ಳಿ ಕೃಷ್ಣ, ಮೂಗ್ ಸುರೇಶ್, ರೇಖಾದಾಸ್, ಗುರುರಾಜ ಹೊಸಕೋಟೆ ತಾರಾಗಣವಿದೆ.
ಈ ಚಿತ್ರಕ್ಕೆ ಆರ್.ಗಿರಿಯವರ ಛಾಯಾಗ್ರಹಣ, ಗುರುರಾಜ್ ಹೊಸಕೋಟೆ ಸಂಗೀತ, ಮದನ್ ಹರಿಣಿ ನೃತ್ಯ ನಿರ್ದೇಶನ ಮನು ಸಂಭಾಷಣೆ, ಕೆ.ಈಶ್ವರ್ ಸಂಕಲನ, ಎಸ್.ರಮೇಶ್ ಕಥೆ, ಚಿತ್ರಕಥೆ ರಚಿಸಿದ್ದಾರೆ. (ಒನ್ಇಂಡಿಯಾ ಕನ್ನಡ)