Don't Miss!
- News 1951 ರಿಂದ 2019 : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಇಲ್ಲಿದೆ ವಿವರ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಧ್ಯರಾತ್ರಿಯಲ್ಲಿ ಶಿವಣ್ಣ 'ಆರ್ಯನ್'ಗೆ ಕ್ಷೀರಾಭಿಷೇಕ
ಚಿತ್ರವೊಂದು ಬಿಡುಗಡೆಯಾದ ಮೇಲೆ ಅಭಿಮಾನಿಗಳು ಮಾಲಾರ್ಪಣೆ ಮಾಡುವುದು, ಪಟಾಕಿ ಸಿಡಿಸುವುದು ಹಾಗೂ ಕ್ಷೀರಾಭಿಷೇಕ ಮಾಡುವುದು ಮಾಮೂಲಿ ಸಂಗತಿ. ಆದರೆ ಬಿಡುಗಡೆ ಇರಲಿ ಇನ್ನೂ ಸೆನ್ಸಾರ್ ಗೂ ಮುನ್ನವೇ 'ಆರ್ಯನ್' ಕಟೌಟ್ ಗೆ ಕ್ಷೀರಾಭಿಷೇಕ ಮಾಡಿ ತಮ್ಮ ಅಭಿಮಾನ ಮೆರೆದಿದ್ದಾರೆ ಫ್ಯಾನ್ಸ್.
ಬೆಂಗಳೂರು
ರಾಜಾಜಿನಗರದ
ನವರಂಗ್
ಚಿತ್ರಮಂದಿರದಲ್ಲಿ
'ಆರ್ಯನ್'
ಚಿತ್ರದ
ಬೃಹತ್
ಕಟೌಟ್
ಇಡಲಾಗಿದೆ.
ಚಿತ್ರಕ್ಕೆ
ಇನ್ನೂ
ಸೆನ್ಸಾರ್
ಪೂರ್ತಿಯಾಗಿಲ್ಲ.
ಇದೇ
ಚಿತ್ರಮಂದಿರದಲ್ಲಿ
ಕಿಚ್ಚ
ಸುದೀಪ್
ಅವರ
'ಮಾಣಿಕ್ಯ'
ಚಿತ್ರ
ಪ್ರದರ್ಶನ
ಕಾಣುತ್ತಿದೆ.
ಈ ಸಂದರ್ಭದಲ್ಲಿ ಡಾ.ಶಿವರಾಜ್ ಕುಮಾರ್ ಅಭಿಮಾನಿಗಳು ಶುಕ್ರವಾರ (ಜು.25) ರಾತ್ರಿ ಕ್ಷೀರಾಭಿಷೇಕ ಮಾಡಿದ್ದಾರೆ. ನೂರಾರು ಸಂಖ್ಯೆಯಲ್ಲಿ ನಂದಿನಿ ಹಾಲಿನ ಪಾಕೆಟ್ ಹಿಡಿದು ಆಗಮಿಸಿದ ಶಿವಣ್ಣ ಅಭಿಮಾನಿಗಳು ಕಟೌಟ್ ಗೆ ಹಾಲಿನ ಅಭಿಷೇಕ ಮಾಡಿದ್ದಾರೆ.
ಖ್ಯಾತ ನಿರ್ದೇಶಕ ಡಿ.ರಾಜೇಂದ್ರಬಾಬು ನಿರ್ದೇಶಿಸಿದ ಕಟ್ಟಕಡೆಯ ಈ ಚಿತ್ರ ಇದಾಗಿದೆ. ಇದೇ ಮೊಟ್ಟ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕ್ರೀಡಾ ತರಬೇತುದಾರನಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಚಿತ್ರದಲ್ಲಿ ಅವರದು ಅಥ್ಲೀಟ್ ಕೋಚ್ ಪಾತ್ರ.
ಡಿ.ರಾಜೇಂದ್ರ ಬಾಬು ಅವರ ಅಕಾಲಿಕ ಮರಣದ ಬಳಿಕ ಗುರುದತ್ ಅವರು ಚಿತ್ರವನ್ನು ನಿರ್ದೇಶಿಸಿದ್ದಾರೆ. ಆದರೆ ಚಿತ್ರವನ್ನು ಡಿ.ರಾಜೇಂದ್ರ ಬಾಬು ಅವರ ಹೆಸರಲ್ಲೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಲಾಗಿದೆ. ಚುನಾವಣೆ ಸೋಲಿನ ನಂತರ ರಮ್ಯಾ ಅವರ ಕಮ್ ಬ್ಯಾಕ್ ಚಿತ್ರ ಇದಾಗಿದ್ದು, ಚಿತ್ರದ ಯಶಸ್ಸಿನ ಮೇಲೆ ಸಿನಿ ಭವಿಷ್ಯ ನಿಂತಿದೆ. (ಏಜೆನ್ಸೀಸ್)