Don't Miss!
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Sports CSK vs LSG IPL 2024: ಚೆನ್ನೈನ ಚೆಪಾಕ್ ಕೋಟೆಯನ್ನು ಭೇದಿಸುವುದೇ ಲಕ್ನೋ?; ಸಂಭಾವ್ಯ ಆಡುವ 11ರ ಬಳಗ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಿಸ್ ಮಲ್ಲಿಗೆ'ಯಾಗಿ ಬದಲಾದ ಮೈಸೂರು ಮಲ್ಲಿಗೆ
ಹಲವಾರು ವಾದ ವಿವಾದ ಚರ್ಚೆಗೆ ಆಸ್ಪದ ನಿಡಿದ್ದ ರೂಪಾ ನಟರಾಜ್ ಅಭಿನಯದ 'ಮೈಸೂರು ಮಲ್ಲಿಗೆ' ವಿವಾದ ಸದ್ಯಕ್ಕೆ ಬಗೆಹರಿದಿದೆ. ಚಿತ್ರಕ್ಕೆ ಹೊಸ ಶೀರ್ಷಿಕೆ ಕೊಡಲಾಗಿದೆ. 'ಮಿಸ್ ಮಲ್ಲಿಗೆ' ಎಂಬುದು ಚಿತ್ರದ ಹೊಸ ಹೆಸರು.
ಈ ಚಿತ್ರದ ಶೀರ್ಷಿಕೆ ವಿರುದ್ಧ ನಿರ್ದೇಶಕ ಟಿಎಸ್ ನಾಗಾಭರಣ, ನಿರ್ಮಾಪಕ ಹರಿ ಖೋಡೆ ಹಾಗೂ ಕೆಎಸ್ ನರಸಿಂಹ ಸ್ವಾಮಿ ಪ್ರತಿಷ್ಠಾನ ಚಿತ್ರದ ಶೀರ್ಷಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಕೋರ್ಟ್ ಮೆಟ್ಟಿಲೇರಿತ್ತು. ['ಮೈಸೂರು ಮಲ್ಲಿಗೆ' ಚಿತ್ರ ಬಿಡುಗಡೆಗೆ ಕೋರ್ಟ್ ತಡೆ]
ಈ ಹಿಂದೆ 'ಆಸ್ಕರ್' ಎಂಬ ವಿನೂತನ ಶೈಲಿಯ ಚಿತ್ರ ನಿರ್ದೇಶಿಸಿದ್ದ ಆಸ್ಕರ್ ಕೃಷ್ಣ 'ಮೈಸೂರು ಮಲ್ಲಿಗೆ' ಚಿತ್ರಕ್ಕೆ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶಿಸುವುದರೊಂದಿಗೆ ನಿರ್ಮಾಣದ ಜವಾಬ್ದಾರಿಯನ್ನು ಕೂಡ ಹೊತ್ತಿದ್ದಾರೆ.
ತಮ್ಮ ಚಿತ್ರದಲ್ಲಿ ಯಾವುದೇ ಅಶ್ಲೀಲತೆ ಇಲ್ಲ. ಸಮಾಜಕ್ಕೆ ಕೆಟ್ಟ ಸಂದೇಶವೂ ಇಲ್ಲ. ಮಹಿಳೆಯರ ಮೇಲಿನ ಶೋಷಣೆಯನ್ನು ಚಿತ್ರದಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ. ಈ ಚಿತ್ರದಲ್ಲಿ ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುದ ಕೆಲಸ ಮಾಡಿದ್ದೇವೆ ಎನ್ನುತ್ತಾರೆ ಆಸ್ಕರ್ ಕೃಷ್ಣ. (ಏಜೆನ್ಸೀಸ್)