Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನವರಿಯಲ್ಲಿ ತೆರೆಗೆ ಪುನೀತ್ ರಾಜ್ 'ನಿನ್ನಿಂದಲೇ'
ಹೊಸವರ್ಷದಲ್ಲಿ ಹೊಸ ಭರವಸೆ ಮೂಡಿಸಿರುವ ಚಿತ್ರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ನಿನ್ನಿಂದಲೇ'. ಈ ಚಿತ್ರದ ಬಗ್ಗೆ ಚಿತ್ರೋದ್ಯಮ ಬಹಳ ನಿರಿಕ್ಷೆಗಳನ್ನಿಟ್ಟುಕೊಂಡಿದೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಚಿತ್ರವನ್ನು ತೆರೆಗೆ ತಂದಿದ್ದಾರೆ ನಿರ್ದೇಶಕ ಜಯಂತ್ ಸಿ ಪರಾಂಜೆ.
ಇತ್ತೀಚೆಗಷ್ಟೇ ಚಿತ್ರೀಕರಣ ಮುಗಿದಿದ್ದು ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮೂಲಗಳ ಪ್ರಕಾರ 'ನಿನ್ನಿಂದಲೇ' ಚಿತ್ರ ಜನವರಿ 9, 2014ಕ್ಕೆ ತೆರೆಗೆ ಅಪ್ಪಳಿಸುತ್ತಿದೆ. 'ಯಾರೇ ಕೂಗಾಡಲಿ' ಚಿತ್ರದ ಬಳಿಕ ತೆರೆಕಾಣುತ್ತಿರುವ ಪುನೀತ್ ಚಿತ್ರ ಇದಾಗಿದೆ. ['ನಿನ್ನಿಂದಲೇ' ಆಡಿಯೋ ರಿಲೀಸ್ಗೆ ಮಹೇಶ್ ಬಾಬು]
ಮುಂಬೈ ಚೆಲುವೆ, ಮಾಜಿ ಮಿಸ್ ಇಂಡಿಯಾ ಎರಿಕಾ ಫರ್ನಾಂಡೀಸ್ ಚಿತ್ರದ ನಾಯಕಿ. ಇದೇ ಮೊಟ್ಟಮೊದಲ ಬಾರಿಗೆ ತೆಲುಗಿನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಚಿತ್ರದ ಪಾತ್ರವರ್ಗದಲ್ಲಿ ತಿಲಕ್ ಶೇಖರ್, ವಿನಾಯಕ ಜೋಶಿ, ಅವಿನಾಶ್ ಮುಂತಾದವರಿದ್ದಾರೆ.
ಡಿಸೆಂಬರ್ 19ರಂದು ಚಿತ್ರದ ಆಡಿಯೋ ಬಿಡುಗಡೆಯಾಗುತ್ತಿದ್ದು ಅರಮನೆ ಮೈದಾನ ಅಥವಾ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ತೆಲುಗಿನ 'ಪ್ರಿನ್ಸ್' ಖ್ಯಾತಿಯ ಮಹೇಶ್ ಬಾಬು ಮುಖ್ಯ ಅತಿಥಿಯಾಗಿ ಆಗಮಿಸುತ್ತಿರುವುದು ವಿಶೇಷ.
ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ಈ ಚಿತ್ರವನ್ನು ವಿಜಯ್ ಕುಮಾರ್ ನಿರ್ಮಿಸುತ್ತಿದ್ದಾರೆ. ಚಿತ್ರವನ್ನು ಭಾರಿ ಬಜೆಟ್ ನಲ್ಲಿ ನಿರ್ಮಿಸಲಾಗಿದೆ. ಅಮೆರಿಕಾದಲ್ಲಿ ನೆಲೆನಿಂತ ಭಾರತೀಯ ಕುಟುಂಬ, ಅಲ್ಲಿಗೆ ಬರುವ ಮತ್ತೊಂದು ಕುಟುಂಬದ ನಡುವಿನ ಕಥಾಹಂದರವನ್ನು 'ನಿನ್ನಿಂದಲೇ' ಒಳಗೊಂಡಿದೆ.
ಬಹುತೇಕ ಭಾಗದ ಚಿತ್ರೀಕರಣ ನ್ಯೂಯಾರ್ಕ್ ನಲ್ಲಿ ನಡೆದಿದೆ. ಕೊನೆಯ ಹಂತದ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ನಡೆದಿದೆ. ಮಣಿಶರ್ಮ ಸಂಗೀತ ಚಿತ್ರಕ್ಕಿದೆ. ಈ ಚಿತ್ರದ ಬಗ್ಗೆ ಮಾತನಾಡಿರುವ ಜಯಂತ್, "ಈ ಚಿತ್ರವನ್ನು ಹಿಂದಿಯಲ್ಲಿ ಮಾಡಬೇಕು ಎಂದುಕೊಂಡಿದ್ದೆ. ಆದರೆ ಪುನೀತ್ ಗೆ ಕಥೆ ಹೇಳಿದಾಗ ಅವರು ಕೂಡಲೆ ಒಪ್ಪಿಕೊಂಡರು" ಎಂದಿದ್ದಾರೆ. (ಏಜೆನ್ಸೀಸ್)