Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಚಂದ್ರ'ಮುಖಿ ಶ್ರೀಯಾ ಈಗ ಕೆಎಂಎಫ್ ರಾಯಭಾರಿ
ರೂಪಾ ಅಯ್ಯರ್ ನಿರ್ದೇಶನದ 'ಚಂದ್ರ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿಯಿಟ್ಟ ಬೊಂಬಾಟ್ ಬೆಡಗಿ ಶ್ರೀಯಾ ಸರನ್. ಈಗವರು ಕೆಎಂಎಫ್ ಉತ್ಪನ್ನವೊಂದಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಕೆಎಂಎಫ್ ಎಂಡಿ ಪ್ರೇಮನಾಥ್ ತಿಳಿಸಿದ್ದಾರೆ.
ಈಗಾಗಲೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೆಎಂಎಫ್ ನ ನಂದಿನಿ ಉತ್ಪನ್ನಗಳ ರಾಯಭಾರಿಗಳಾಗಿ ನಿಯೋಜನೆಗೊಂಡಿರುವುದು ಗೊತ್ತೇ ಇದೆ. [ಚಂದ್ರ ಚಿತ್ರವಿಮರ್ಶೆ]
ಟ್ರೆಟ್ರಾಪ್ಯಾಕ್ ಸಂಸ್ಥೆ ಹಾಗೂ ಕೆಎಂಎಫ್ ಸಂಯುಕ್ತಾಶ್ರಯದಲ್ಲಿ ಮಂಗಳವಾರ (ಏ.29) ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಗುಡ್ ಲೈಫ್ ಹಾಲಿನ ಟೆಟ್ರಾಪ್ಯಾಕನ್ನು ಶ್ರೀಯಾ ಸರನ್ ಬಿಡುಗಡೆ ಮಾಡಲಿದ್ದಾರೆ.
ದಕ್ಷಿಣ ಭಾರತದಲ್ಲಿ ಮಾರುಕಟ್ಟೆಯನ್ನು ವಿಸ್ತರಿಸಲು ಕೆಎಂಎಫ್ ಮುಂದಡಿಯಿಟ್ಟಿದ್ದು, ಟೆಟ್ರಾಪ್ಯಾಕ್ ನಲ್ಲಿ ಹಾಲನ್ನು ಬಿಡುಗಡೆ ಮಾಡುತ್ತಿದೆ. ಇದೀಗ ಶ್ರೀಯಾ ಅವರನ್ನು ರಾಯಭಾರಿಯಾಗಿ ನಿಯೋಜಿಸಿದೆ. ಪ್ರಸ್ತುತ ಶ್ರೀಯಾ ಅವರು ತೆಲುಗು, ತಮಿಳು ಹಾಗೂ ಹಿಂದಿಯ ತಲಾ ಒಂದೊಂದು ಚಿತ್ರದಲ್ಲಿ ಬಿಜಿಯಾಗಿದ್ದಾರೆ. (ಏಜೆನ್ಸೀಸ್)