Don't Miss!
- Automobiles ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- News SSLC Result 2024: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಯಾವಾಗ? ಪರಿಶೀಲಿಸುವುದೇಗೆ?-ಮಾಹಿತಿ, ವಿವರ
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶರವಣ ನಿರ್ಮಾಣದಲ್ಲಿ ಸ್ಯಾಂಡಲ್ ವುಡ್ ಗೆ 2 ಚಿತ್ರ
ಪ್ರಸಕ್ತ ಲೋಕಸಭಾ ಚುನಾವಣೆಯ ಮುನ್ನೆಲೆಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳ ಮಧ್ಯೆಯೂ ಜೆಡಿಎಸ್ ಪಕ್ಷದ ಮುಖಂಡ, ಶ್ರೀ ಸಾಯಿ ಗೋಲ್ಡ್ ಪ್ಯಾಲೆಸ್ ಮಾಲೀಕ ಡಾ. ಟಿ.ಎ. ಶರವಣ ಅವರು ಕನ್ನಡ ಚಿತ್ರೋದ್ಯಮದತ್ತ ದೃಷ್ಟಿ ಹಾಯಿಸಿದ್ದಾರೆ.
ಬೆಂಗಳೂರು ದಕ್ಷಿಣದಿಂದ ಶರವಣ ಅವರು ಕಣಕ್ಕಿಳಿಯುವ ಸಾಧ್ಯತೆಯಿದೆ ಎಂಬ ಮಾತು ಕೊನೆಯ ಘಳಿಗೆಯವರೆಗೂ ಕೇಳಿಬಂದಿತ್ತು. ಆದರೆ ರಾಜ್ಯಾದ್ಯಂತ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡರು ಸೂಚಿಸಿರುವ ಹಿನ್ನೆಲೆಯಲ್ಲಿ ಶರವಣ ಅವರು ಪಕ್ಷದ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
ಬಂಗಾರದ ಮನುಷ್ಯ ಟಿಎ ಶರವಣ ಗಾಂಧಿನಗರಕ್ಕೆ: ಈ ಮಧ್ಯೆ, ಸ್ಯಾಂಡಲ್ ವುಡ್ ಗೆ ಗಮನಾರ್ಹ ಕೊಡುಗೆ ನೀಡಬೇಕೆಂದು ನಿರ್ಧರಿಸಿರುವ ಶರವಣ, ಎರಡು ಚಿತ್ರಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. 'ರುದ್ರತಾಂಡವ' ಮತ್ತು 'ವ್ಯೂಹ' ಚಿತ್ರಗಳು ಶರವಣ ನಿರ್ಮಾಣದಲ್ಲಿ ತೆರೆ ಕಾಣಲು ಸಿದ್ಧವಾಗುತ್ತಿವೆ. ತನ್ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. (ಸಾಯಿ ಗೋಲ್ಡ್ ಪ್ಯಾಲೇಸ್ ಮಾಲೀಕ ಶರವಣಗೆ ಡಾಕ್ಟರೇಟ್)
'ರುದ್ರತಾಂಡವ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಮತ್ತು ಚಿರಂಜೀವಿ ಸರ್ಜಾ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು, ವ್ಯೂಹ ಚಿತ್ರದಲ್ಲಿ ಪ್ರಿಯಾಮಣಿ, ರಂಗಾಯಣ ರಘು ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ' ಎಂದು ಡಾ. ಟಿ.ಎ. ಶರವಣ 'ಒನ್ಇಂಡಿಯಾಕನ್ನಡ'ಕ್ಕೆ ನೀಡಿದ ಸಂದರ್ಶನದಲ್ಲಿ ಮಂಗಳವಾರ ತಿಳಿಸಿದ್ದಾರೆ.
ಈ ಎರಡೂ ಚಿತ್ರಗಳ ನಿರ್ಮಾಣದಲ್ಲಿ ಗೆಳೆಯ ವಿನೋದ್ ಅವರು ತಮಗೆ ನೆರವು ನೀಡಲಿದ್ದಾರೆ. ವಾಣಿಜ್ಯಿಕವಾಗಿ ಹಣ ಮಾಡುವ ಉದ್ದೇಶದಿಂದ ಈ ಚಿತ್ರಗಳನ್ನು ಮಾಡುತ್ತಿಲ್ಲ. ನಮ್ಮ ಕನ್ನಡ ಚಿತ್ರೋದ್ಯಮಕ್ಕೆ ಒಳ್ಳೆದ ಸಂದೇಶವಿರುವ ಸದಭಿರುಚಿ ಚಿತ್ರಗಳನ್ನು ನೀಡಲೆಂದು ನಿರ್ಮಾಣ ಕಾರ್ಯದಲ್ಲಿ ತೊಡಗುತ್ತಿರುವುದಾಗಿ ಶರವಣ ಹೇಳಿದ್ದಾರೆ.