Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಗಿಣಿ ಐಪಿಎಸ್' ಚಿತ್ರದಲ್ಲಿ ಉಪೇಂದ್ರ ಡೈಲಾಗ್
ಆದರೆ ಇದೀಗ ಚಿತ್ರಕ್ಕೆ ನಾಯಕ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಹುಬ್ಬಳ್ಳಿ ಶೈಲಿಯಲ್ಲಿ ಡೈಲಾಗ್ ಹೊಡೆದಿದ್ದಾರೆ. ಇದು ಚಿತ್ರದ ಆರಂಭದಲ್ಲಿ ಮೂಡಿಬರಲಿದೆ. ಈ ಮೂಲಕ 'ರಾಗಿಣಿ ಐಪಿಎಸ್' ಚಿತ್ರಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.
ಹುಬ್ಬಳ್ಳಿ-ಧಾರವಾಡ ಹಿನ್ನೆಲೆಯಲ್ಲಿ ಇಡೀ ಚಿತ್ರವೂ ಇರುತ್ತದೆ. ಹುಬ್ಬಳ್ಳಿ ಹಾಗೂ ಉತ್ತರ ಕರ್ನಾಟಕದ ಪ್ರಸಿದ್ಧಿಯನ್ನು, ಖ್ಯಾತನಾಮರನ್ನು, ಪ್ರೇಕ್ಷಣೀಯ ಸ್ಥಳಗಳನ್ನು, ವಿದ್ಯಾ ಸಂಸ್ಥೆಗಳ, ವಾಣಿಜ್ಯ ನಗರಿ ಕುರಿತಾಗಿ ಸಿದ್ದಪಡಿಸಿರುವ ಸಂಭಾಷಣೆಯನ್ನು ಉಪೇಂದ್ರ ಹೇಳಿದ್ದಾರೆ.
ಇಂತಹ ಸ್ಥಳದಲ್ಲಿ ವ್ಯಾಗ್ರನೊಬ್ಬನಿದ್ದಾನೆ ಎಂದು ಎರಡರಿಂದ ಮೂರು ನಿಮಿಷಗಳ ಮಾತುಗಳನ್ನು ಕರಿಸುಬ್ಬು ಅವರ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ರೆಕಾರ್ಡ್ ಮಾಡಲಾಯಿತು. ಆನಂದ್ ಪಿ ರಾಜು ಅವರ ನಿರ್ದೇಶನದಲ್ಲಿ ಗ್ಲಾಮರ್ ನಟಿ ಒಂದು ಕಟುವಾದ ಪೋಲೀಸು ಅಧಿಕಾರಿಯಾಗಿ ರಾಗಿಣಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.
ಇದು ಸಾಮಾಜಿಕ ಪಿಡುಗು ಹಾಗೂ ಇನ್ನಿತರೆ ವಿಚಾರಗಳನ್ನು ಸೇರಿಸಿದ ಹೆಣೆದ ಕಥಾನಕ. ಅಂತಹ ಸ್ಥಿತಿಯಲ್ಲಿ ಪೋಲೀಸು ಅಧಿಕಾರಿ ತೆಗೆದುಕೊಳ್ಳುವ ನಿರ್ಣಯ ಏನು ಎಂಬುದು ಚಿತ್ರದ ಕಥಾಹಂದರ. ಕೆ ವಿ ರಾಜು ಅವರ ಹರಿತವಾದ ಸಂಭಾಷಣೆ ಚಿತ್ರಕ್ಕಿದೆ.
ನಂದಕುಮಾರ್ ಅವರ ಛಾಯಾಗ್ರಹಣ, ಫರ್ಹಾನ್ ರೋಶನ್(ಈ ಹಿಂದೆ ಎಮಿಲ್) ಅವರ ಸಂಗೀತ, ಕೌರವ ವೆಂಕಟೇಶ್, ಮಾಸ್ ಮಾಧ ಅವರ ಸಾಹಸ ದೃಶ್ಯಗಳಿವೆ. ಇಮ್ರಾನ್ ಸರ್ದಾರಿಯ ಅವರ ನೃತ್ಯ ನಿರ್ದೇಶನವಿದ್ದು ರಾಜೇಶ್ ರಾಮನಾಥ್ ಅವರು ರೀರೆಕಾರ್ಡಿಂಗ್ ಚಿತ್ರಕ್ಕಿದೆ.
ಹುಬ್ಬಳ್ಳಿ, ಧಾರವಾಡ ಸುತ್ತ ಮುತ್ತ ಚಿತ್ರೀಕರಣ ಮಾಡಿರುವ 'ರಾಗಿಣಿ ಐಪಿಎಸ್' ಚಿತ್ರದಲ್ಲಿ ಅವಿನಾಶ್, ನಾರಾಯಣ ಸ್ವಾಮಿ, ಪೆಟ್ರೋಲ್ ಪ್ರಸನ್ನ, ವೀಣಾ ಸುಂದರ್, ವಿವೇಕ್ ಪಂಡಿತ್, ಅಚ್ಯುತ್ ಕುಮಾರ್ ಹಾಗೂ ಇನ್ನಿತರರು ಪೋಷಕ ಪಾತ್ರಗಳಲ್ಲಿದ್ದಾರೆ.(ಒನ್ಇಂಡಿಯಾ ಕನ್ನಡ)