Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಶಿವಯೋಗಿ ಪುಟ್ಟಯ್ಯಜ್ಜ'ನಾಗಿ ವಿಜಯರಾಘವೇಂದ್ರ
ಗಾನಯೋಗಿ ಶ್ರೀ ಪಂಚಾಕ್ಷರಿ ಗವಾಯಿಗಳು ಯಾರಿಗೆ ತಾನೇ ಗೊತ್ತಿಲ್ಲ ಅಂಥ ಮಹಾನ್ ಸಂಗೀತ ಗಾರುಡಿಗರ ಶಿಷ್ಯ ಹಾಗೂ ಅವರ ನಂತರ ಗಾನಯೋಗಿಯ ಆದರ್ಶಗಳನ್ನು ಮುಂದುವರೆಸಿಕೊಂಡು ಬಂದಂತಹ ಮಹಾನ್ ಶಿವಯೋಗಿ ಶ್ರೀ ಪುಟ್ಟರಾಜ ಗವಾಯಿಗಳು.
ಶ್ರೀ ಪುಟ್ಟರಾಜ ಗವಾಯಿಗಳ ಸಂಪೂರ್ಣ ಜೀವನ ಚರಿತ್ರೆ ಆಧಾರಿತ 'ಶಿವಯೋಗಿ ಪುಟ್ಟಯ್ಯಜ್ಜ' ಎಂಬ ಚಿತ್ರವೀಗ ನಿರ್ಮಾಣವಾಗಿದೆ. ನಟ ವಿಶ್ವ ವಿಜೇತರ ಪುತ್ರಿ ಹಂಸವಿಜೇತ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ನಟ ವಿಜಯ ರಾಘವೇಂದ್ರ ಪುಟ್ಟರಾಜ ಗವಾಯಿಗಳ ಪಾತ್ರ ನಿರ್ವಹಿಸಿದ್ದಾರೆ. [ಹೆಸರು ಬದಲಾಯಿಸಿಕೊಂಡ ವಿಜಯ ರಾಘವೇಂದ್ರ]
ಮುಂದಿನ ತಿಂಗಳು ಬಿಡುಗಡೆಗೆ ಸಿದ್ಧವಾಗಿರುವ ಈ ಚಿತ್ರದಲ್ಲಿ ನಟಿ ಶ್ರುತಿ ಪುಟ್ಟರಾಜ ಗವಾಯಿಗಳ ತಾಯಿ ಪಾತ್ರದಲ್ಲಿ ಅಭಿನಯಿಸಿದ್ದು ಚಿತ್ರ ನಿರ್ದೇಶಕ ಶಂಕರ್ ಲಿಂಗ ಸುಗ್ನಳ್ಳಿ, ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಪಾತ್ರ ನಿರ್ವಹಿಸಿದ್ದಾರೆ. 5 ತಿಂಗಳ ಮಗುವಾಗಿದ್ದಾಗಲೇ ತನ್ನ ಕಣ್ಣುಗಳನ್ನು ಕಳೆದುಕೊಂಡಿದ್ದ ಪುಟ್ಟರಾಜರು ಸಹಸ್ರಾರು ಅಂಧರಿಗೆ ದಾರಿದೀಪವಾಗಿದ್ದರು. ಎಲ್ಲಾ ಥರದ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದ ಅವರ ಕೈಲಿ ಪಿಟೀಲು ಇದ್ದರೆ, ಸರಸ್ವತಿಯ ಕೈಲಿ ವೀಣೆಯಿದ್ದಹಾಗೆ.
ಈ ಹಿಂದೆ ಬನಶಂಕರಿ ಮಹಾತ್ಮೆ ಚಿತ್ರ ನಿರ್ಮಿಸಿದ್ದ ಶ್ಯಾಮ್ ಮುಕುಂದ ನವಲೆ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಗವಾಯಿಗಳ 3 ಹಾಡು ಷರೀಫರ ಒಂದು ಹಾಡನ್ನು ಈ ಚಿತ್ರದಲ್ಲಿ ಬಳಸಿಕೊಂಡಿದ್ದು ಅಮರ ಪ್ರಿಯ 2 ಹಾಡುಗಳನ್ನು ಬರೆದಿದ್ದಾರೆ. ಚಿತ್ರಕ್ಕೆ ಸತೀಶ್ಚಂದ್ರ ಬೆಳಮಂಗಲ ಛಾಯಾಗ್ರಹಣ, ಅಮರಪ್ರಿಯ ಸಂಗೀತವಿದ್ದು ಉಳಿದ ತಾರಾಗಣದಲ್ಲಿ ಅಭಿಜಿತ್, ಅನುಪ್ರಭಾಕರ್, ಶಶಿಕುಮಾರ್, ಉಮೇಶ್ ನವಿಲೆ, ಭವ್ಯ ಶ್ರೀ ರೈ ಅಭಿನಯಿಸಿದ್ದಾರೆ. (ಏಜೆನ್ಸೀಸ್)