Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೋಟ್ಯಾಧಿಪತಿ' ಶೀರ್ಷಿಕೆಯಲ್ಲಿ ವ್ಯಾಕರಣ ದೋಷ
'ಕೋಟ್ಯಾಧಿಪತಿ' ಎಂಬ ಶಬ್ದವನ್ನು ಹುಡುಕಿದರೆ ಯಾವುದೇ ನಿಘಂಟಿನಲ್ಲಿ ಕಾಣಸಿಗುವುದಿಲ್ಲ. 'ಕೋಟಿ' ಮತ್ತು 'ಅಧಿಪತಿ' ಎಂಬ ಎರಡು ಪದಗಳನ್ನು ಕೂಡಿಸಿ ಬರೆದರೆ 'ಕೋಟ್ಯಧಿಪತಿ' ಎಂದಾಗುತ್ತದೆಯೇ ಹೊರತು 'ಕೋಟ್ಯಾಧಿಪತಿ' ಅಲ್ಲ. ಇನ್ನು 'ಕೋಟ್ಯಧಿಪತಿ' ಪದವನ್ನು ಸಂಧಿ ಮಾಡಿದಾಗ ಯಣ್ ಸಂಧಿಯಾಗುತ್ತದೆ.
ಇದಕ್ಕೆ ಇನ್ನೊಂದೆರಡು ಉದಾಹರಣೆಗಳನ್ನೂ ಕೊಡಬಹುದು. ಅತಿ + ಅಂತ್ಯ =ಅತ್ಯಂತ ಹಾಗೆಯೇ ಮನು + ಅಂತರ= ಮನ್ವಂತರ. ಆದರೆ 'ಲಕ್ಷಾಧಿಪತಿ' ಪದವನ್ನು ಬಿಡಿಸಿ ಬರೆದಾಗ ಲಕ್ಷ + ಅಧಿಪತಿ = ಲಕ್ಷಾಧಿಪತಿ (ಸವರ್ಣದೀರ್ಘ ಸಂಧಿ) ಆಗುತ್ತದೆ. ಹಾಗಾಗಿ ಕೋಟ್ಯಂತರ ವೀಕ್ಷಕರು ನೋಡುವ ಕೋಟ್ಯಧಿಪತಿ ಶೀರ್ಷಿಕೆಯಲ್ಲಿನ ವ್ಯಾಕರಣ ದೋಷವನ್ನು ಸರಿಪಡಿಸಬೇಕು ಎಂಬುದಷ್ಟೇ ನನ್ನ ವಿನಂತಿ. ನನ್ನ ಅಭಿಪ್ರಾಯದಲ್ಲಿ ಏನಾದರೂ ತಪ್ಪಿದ್ದರೆ ದಯವಿಟ್ಟು ತಿಳಿಸಿ.
ಕನ್ನಡದ ವ್ಯಾಕರಣವನ್ನು ಇಂದು ಮತ್ತೊಮ್ಮೆ ವಿಶದವಾಗಿ ತಿಳಿದುಕೊಳ್ಳಬೇಕಾದ ಅಗತ್ಯ ತುಂಬಾ ಇದೆ. ಏನಂತೀರಾ ಸ್ವಾಮಿ. ನನ್ನ ಈ ವಾದಕ್ಕೆ ಶತಾಯುಷಿಯಾಗುತ್ತಿರುವ ನಡೆದಾಡುವ ನಿಘಂಟು ಎಂದೇ ಖ್ಯಾತರಾಗಿರುವ ಪ್ರೊ. ಜಿ. ವೆಂಕಟಸುಬ್ಬಯ್ಯನವರ ಕೃಪೆ ಇದೆ ಅಂದುಕೊಳ್ಳುತ್ತೇನೆ.