Don't Miss!
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- News Darshan: ಡಿ.ಕೆ. ಸುರೇಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುವರ್ಣ ನ್ಯೂಸ್ ಚಾನಲ್ ನಲ್ಲಿ ಬೃಹತ್ 'ಬ್ರಹ್ಮಾಂಡ'
ಈ ಬಾರಿಯೂ ಸ್ವಾಮೀಜಿಗಳು ತಮ್ಮ ಅಖಂಡ 'ಬ್ರಹ್ಮಾಂಡ'ವನ್ನು ಬಿಚ್ಚಿಡಲಿದ್ದಾರೆ. ಸನಾತನ ಧರ್ಮ, ವಾಸ್ತು, ಪೂಜಾ ವಿಧಾನಗಳು, ದೇವಸ್ಥಾನಗಳ ಬಗ್ಗೆ ಸ್ವಾಮೀಜಿಗಳು ನಿರರ್ಗಳವಾಗಿ ಮಾತನಾಡಲಿದ್ದಾರೆ. ಸೋಮವಾರದಿಂದ ಶುಕ್ರವಾರದ ತನಕ ಪ್ರತಿನಿತ್ಯ ಸಂಜೆ 6.30ಕ್ಕೆ ಬ್ರಹ್ಮಾಂಡ ಕಾರ್ಯಕ್ರಮ ಪ್ರಸಾರವಾಗಲಿದೆ.
ಈಗಾಗಲೆ ಆರಂಭವಾಗಿರುವ ಬ್ರಹ್ಮಾಂಡ ಕಾರ್ಯಕ್ರಮವನ್ನು ನೀವು ಒಮ್ಮೆ ವೀಕ್ಷಿಸಿ ತಮ್ಮ ಮುಕ್ತ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದು. ಈ ಹಿಂದೆ ಇದೇ ಸ್ವಾಮೀಜಿಗಳು ಜೀ ಕನ್ನಡ ವಾಹಿನಿಯಲ್ಲಿ ಬೃಹತ್ ಬ್ರಹ್ಮಾಂಡ, ಭವ್ಯ ಬ್ರಹ್ಮಾಂಡ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ.
ಈಗ ನರೇಂದ್ರ ಬಾಬು ಶರ್ಮ ಅವರು ನಡೆಸಿಕೊಡುವ ಬ್ರಹ್ಮಾಂಡ ಕಾರ್ಯಕ್ರಮವನ್ನು ಸುವರ್ಣ ನ್ಯೂಸ್ ಚಾನಲ್ ನಲ್ಲಿ ನೇರ ಪ್ರಸಾರ ಮಾಡಲಿದೆ. ಟಿವಿ ವಾಹಿನಿಗಳ ಮೂಲಕ ಖ್ಯಾತಿಯ ಉತ್ತುಂಗಕ್ಕೇರಿದ್ದ ನರೇಂದ್ರ ಬಾಬು ಶರ್ಮ ಹಲವಾರು ಕಾರಣಗಳಿಗೆ ವಿವಾದಕ್ಕೆ ಗುರಿಯಾಗಿದ್ದರು.
ಜೀ ಕನ್ನಡ ವಾಹಿನಿಯಿಂದ ಹೊರಬಿದ್ದಿದ್ದ ಸ್ವಾಮೀಜಿಗಳು ಇಷ್ಟು ದಿನಗಳ ಕಾಲ ತಮ್ಮ ಚಿಕ್ಕಗೊಲ್ಲರಹಟ್ಟಿಯ ಜಗನ್ಮಾತ ನಿಲಯದ ಆಶ್ರಮದಲ್ಲೇ ಜ್ಯೋತಿಷ್ಯ, ಭವಿಷ್ಯ, ಗ್ರಹಚಾರ ಫಲಗಳನ್ನು ಹೇಳುತ್ತಿದ್ದರು. ಇನ್ನೇನು ಇವರನ್ನು ಜನ ಮರೆತೆ ಬಿಟ್ಟರೇನೋ ಎಂಬಂತಂತಹ ಪರಿಸ್ಥಿತಿಯಲ್ಲಿ ಇದೀಗ ಸುವರ್ಣ ನ್ಯೂಸ್ ಚಾನಲ್ ನಲ್ಲಿ ಪ್ರತ್ಯಕ್ಷವಾಗಿದ್ದಾರೆ. (ಒನ್ ಇಂಡಿಯಾ ಕನ್ನಡ)