Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ರಿಯಾಲಿಟಿ ಶೋ ಮನೆ ಮುಂದೆ ಮಹಾಲಕ್ಷ್ಮಿ
ನೇರವಾಗಿ ವೀಕ್ಷಕರ ಮನೆಗೆ ಭೇಟಿ ನೀಡಿ ಅಲ್ಲಿಯೇ ಆಟಗಳನ್ನು ಆಡಿಸಿ ಬಹುಮಾನ ವಿತರಿಸುವ ಕಾರ್ಯಕ್ರಮ ಇದು. ಈ ಕಾರ್ಯಕ್ರಮದ ಮೂಲಕ ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಿಗೂ ಭೇಟಿ ನೀಡಿ ತಮ್ಮ ವೀಕ್ಷಕ ಬಳಗವನ್ನು ಮಾತನಾಡಿಸಲಿದೆ ಈಟಿವಿ ಕನ್ನಡ.
ಈಗಾಗಲೆ ವೀಕ್ಷಕರ ನೋಂದಾವಣಿ ಮುಗಿದಿದೆ. ಆಯ್ಕೆಯಾಗಿರುವ ವೀಕ್ಷಕರ ಮನೆಗೆ ಹೋಗಿ ವಿವಿಧ ರೀತಿಯ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಗೆದ್ದವರಿಗೆ ಅಲ್ಲಿಯೇ ಬಹುಮಾನ ವಿತರಣೆ. ಇದು ವಾಹಿನಿಯ ಅಪರೂಪದ ಪ್ರಯೋಗ ಎಂದು ಈಟಿವಿ ವಾಹಿನಿ ಬಳಗ ತಿಳಿಸಿದೆ.
ಇಷ್ಟು ದಿನ ಸುವರ್ಣ ವಾಹಿನಿಯಲ್ಲಿ ಹೊಸ ಹೊಸ ರಿಯಾಲಿಟಿ ಶೋಗಳಿಗೆ ಶ್ರೀಕಾರ ಹಾಕಿರುವ ಅಕುಲ್ ಬಾಲಾಜಿ ಈಗ ಈಟಿವಿ ಬಳಗ ಸೇರಿದ್ದು ಈ ವಿಭಿನ್ನ ಕಾರ್ಯಕ್ರಮದ ನಿರೂಪಣೆ ಜವಾಬ್ದಾರಿಯನ್ನು ಅವರೇ ಹೊತ್ತಿದ್ದಾರೆ.
ಜನವರಿ 12, 2013ರಿಂದ ಕಾರ್ಯಕ್ರಮ ಆರಂಭವಾಗಲಿದ್ದು ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9 ರಿಂದ 10 ಗಂಟೆಗೆ ಪ್ರಸಾರವಾಗಲಿದೆ. ಒಟ್ಟಿನಲ್ಲಿ ವಿಭಿನ್ನವಾಗಿರುವ ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಈಟಿವಿ ವೀಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ. (ಒನ್ಇಂಡಿಯಾ ಕನ್ನಡ)