Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋಲ್ಡನ್ ಸ್ಟಾರ್ ಗಣೇಶ್ ಕಿರುತೆರೆಯಲ್ಲಿ ಹೊಸ ಇನ್ನಿಂಗ್ಸ್
'ಕಾಮಿಡಿ ಟೈಮ್' ಮೂಲಕ ಕಿರುತೆರೆಗೆ ಅಡಿಯಿಟ್ಟ ಗಣೇಶ್ ಬೆಳ್ಳಿತೆರೆಯಲ್ಲಿ ಗೋಲ್ಡನ್ ಸ್ಟಾರ್ ಆಗಿ ಬೆಳಗಿದವರು. ಇದೀಗ ಮತ್ತೆ ಕಿರುತೆರೆಯಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಈಟಿವಿ ಕನ್ನಡದಲ್ಲಿ ಅವರು ಹೊಸ ರೀತಿಯ ಶೋ ನಡೆಸಿಕೊಡಲಿದ್ದಾರೆ.
'ಸೂಪರ್ ಮಿನಿಟ್' ಎಂಬ ಈ ಕಾರ್ಯಕ್ರಮವನ್ನು ಅವರು ನಿರೂಪಿಸಲಿದ್ದು ಶೀಘ್ರದಲ್ಲೇ ಆರಂಭವಾಗಲಿದೆ. ಇದು ಎನ್ ಬಿಸಿ ಟಿವಿಯ 'ಮಿನಿಟ್ ಟು ವಿನ್ ಇಟ್' ಎಂಬ ಜನಪ್ರಿಯ ಶೋನಿಂದ ಸ್ಫೂರ್ತಿ ಪಡೆದಿದೆ. ಈ ಕಾರ್ಯಕ್ರಮದ ವಿಶೇಷತೆ ಎಂದರೆ ಒಂದೇ ನಿಮಿಷದಲ್ಲಿ ಸ್ಪರ್ಧಿಗಳು ಹಲವಾರು ಸವಾಲುಗಳನ್ನು ಎದುರಿಸಬೇಕಾಗುತ್ತದೆ. [ಶಶಾಂಕ್ ಆಕ್ಷನ್ ಕಟ್ ನಲ್ಲಿ 'ಮುಂಗಾರು ಮಳೆ 2']
ವಿವಿಧ ಕ್ಷೇತ್ರಗಳಲ್ಲಿನ ಖ್ಯಾತನಾಮರು ಈ ಶೋನಲ್ಲಿ ಸ್ಪರ್ಧಿಸಲಿದ್ದಾರೆ. ಅವರು ಗೆದ್ದ ಬಹುಮಾನದ ಮೊತ್ತ ಸಂಕಷ್ಟದಲ್ಲಿರುವ ಅಭಿಮಾನಿಗಳ ನೆರವಿಗೆ ಬಳಕೆಯಾಗಲಿದೆ ಎನ್ನುತ್ತವೆ ಮೂಲಗಳು. ಈ ಶೋವನ್ನು ಗಣೇಶ್ ಅಭಿಮಾನಿಗಳು ಕಾತುರದಿಂದ ನಿರೀಕ್ಷಿಸುವಂತಾಗಿದೆ.
ಈ ಗೇಮ್ ಶೋ ಮೂಲಕ ಶ್ರೀಸಾಮಾನ್ಯನ ಜೀವನವನ್ನು ಉತ್ತಮಗೊಳಿಸುವ ಉದ್ದೇಶವನ್ನು ಹೊಂದಿದೆ. ಒಂದು ಉತ್ತಮ ಕಾರ್ಯಕ್ರಮದ ಮೂಲಕ ಕಿರುತೆರೆಗೆ ರೀ ಎಂಟ್ರಿ ಕೊಡುತ್ತಿರುವ ಬಗ್ಗೆ ಗಣೇಶ್ ಅವರಿಗೂ ಸಿಕ್ಕಾಪಟ್ಟೆ ಖುಷಿ ಇದೆ.