Thought for the day
Your page will load in ...
Close Ad X
Advertisement
English ગુજરાતી हिन्दी മലയാളം தமிழ் తెలుగు
 
Share This Story

ಕನ್ನಡ ಫಲಕಕ್ಕೆ ಕೈ ಹಾಕಿದ ಎಂಇಎಸ್‌: ಖಾನಪುರ ಉದ್ರಿಕ್ತ

Published: Friday, October 27, 2006, 23:53 [IST]


ಬೆಳಗಾವಿ : ಎಂಇಎಸ್‌ ಕಾರ್ಯಕರ್ತರು ಕನ್ನಡ ಫಲಕಗಳನ್ನು ತೆಗೆಯಲು ಮುಂದಾದ ಕಾರಣ, ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಉದ್ರಿಕ್ತ ಸ್ಥಿತಿ ಶುಕ್ರವಾರ ನೆಲೆಸಿದೆ.

ಮಹಾರಾಷ್ಟ್ರ ಏಕೀಕರಣ ಸಮಿತಿಯ ಯುವ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಕೆಲವು ಯುವಕರು, ಗುರುವಾರ ಕನ್ನಡ ನಾಮಫಲಕಗಳಿಗೆ ಕೈ ಹಾಕಿದಾಗ, ಪೊಲೀಸರು ವಿರೋಧಿಸಿದರು. ಆ ಯುವಕರ ಗುಂಪು ಕಲ್ಲು ತೂರಾಟ ನಡೆಸಿದಾಗ, ಲಘು ಲಾಠಿ ಪ್ರಹಾರ ಮತ್ತು ಅಶ್ರುವಾಯು ಶೆಲ್‌ ಸಿಡಿಸಿ, ಪೊಲೀಸರು ಗುಂಪನ್ನು ಚದುರಿಸಿದರು.

ಈ ಸಂದರ್ಭದ ಗಲಭೆಯಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪೊಲೀಸ್‌ ಜೀಪು ಮತ್ತಿತರ ಹತ್ತಾರು ವಾಹನಗಳು ಜಖಂಗೊಂಡಿವೆ.

ಎಂಇಎಸ್‌ ಎಚ್ಚರಿಕೆ : ಖಾನಾಪುರದ ಯುವ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಹಾರಾಷ್ಟ್ರದ ವಿಧಾನಸಭೆ ಪ್ರತಿಪಕ್ಷದ ನಾಯಕ ರಾಮದಾಸ ಕದಂ, ಮರಾಠಿಗರ ಮೇಲಿನ ದೌರ್ಜನ್ಯ ನಿಲ್ಲಬೇಕು. ಮಹಾರಾಷ್ಟ್ರದಲ್ಲೂ ಕನ್ನಡಿಗರಿದ್ದಾರೆ.. ಅವರಿಗೆ ಅಪಾಯವಾಗಬಹುದು ಎಂಬುದನ್ನು ಕನ್ನಡಿಗರು ಮರೆಯಬಾರದು ಎಂದು ಎಚ್ಚರಿಸಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ಅಭಿಪ್ರಾಯ ಬರೆಯಿರಿ
Click here to type in Kannada
Subscribe Newsletter
IPL, Subrata Roy Sahara Stadium, Gahunje
Pune Warriors: 6 / 0, 0.2 Overs
1st Test , Lord's Cricket Ground, St John's Wood
England: 208 / 8, 65.3 Overs
IPL, Rajiv Gandhi International Stadium, Uppal, Hyderabad
Match starts at 08:00 pm IST