ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಫಲಕಕ್ಕೆ ಕೈ ಹಾಕಿದ ಎಂಇಎಸ್‌: ಖಾನಪುರ ಉದ್ರಿಕ್ತ

By Staff
|
Google Oneindia Kannada News

ಬೆಳಗಾವಿ : ಎಂಇಎಸ್‌ ಕಾರ್ಯಕರ್ತರು ಕನ್ನಡ ಫಲಕಗಳನ್ನು ತೆಗೆಯಲು ಮುಂದಾದ ಕಾರಣ, ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಉದ್ರಿಕ್ತ ಸ್ಥಿತಿ ಶುಕ್ರವಾರ ನೆಲೆಸಿದೆ.

ಮಹಾರಾಷ್ಟ್ರ ಏಕೀಕರಣ ಸಮಿತಿಯ ಯುವ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಕೆಲವು ಯುವಕರು, ಗುರುವಾರ ಕನ್ನಡ ನಾಮಫಲಕಗಳಿಗೆ ಕೈ ಹಾಕಿದಾಗ, ಪೊಲೀಸರು ವಿರೋಧಿಸಿದರು. ಆ ಯುವಕರ ಗುಂಪು ಕಲ್ಲು ತೂರಾಟ ನಡೆಸಿದಾಗ, ಲಘು ಲಾಠಿ ಪ್ರಹಾರ ಮತ್ತು ಅಶ್ರುವಾಯು ಶೆಲ್‌ ಸಿಡಿಸಿ, ಪೊಲೀಸರು ಗುಂಪನ್ನು ಚದುರಿಸಿದರು.

ಈ ಸಂದರ್ಭದ ಗಲಭೆಯಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪೊಲೀಸ್‌ ಜೀಪು ಮತ್ತಿತರ ಹತ್ತಾರು ವಾಹನಗಳು ಜಖಂಗೊಂಡಿವೆ.

ಎಂಇಎಸ್‌ ಎಚ್ಚರಿಕೆ : ಖಾನಾಪುರದ ಯುವ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಹಾರಾಷ್ಟ್ರದ ವಿಧಾನಸಭೆ ಪ್ರತಿಪಕ್ಷದ ನಾಯಕ ರಾಮದಾಸ ಕದಂ, ಮರಾಠಿಗರ ಮೇಲಿನ ದೌರ್ಜನ್ಯ ನಿಲ್ಲಬೇಕು. ಮಹಾರಾಷ್ಟ್ರದಲ್ಲೂ ಕನ್ನಡಿಗರಿದ್ದಾರೆ.. ಅವರಿಗೆ ಅಪಾಯವಾಗಬಹುದು ಎಂಬುದನ್ನು ಕನ್ನಡಿಗರು ಮರೆಯಬಾರದು ಎಂದು ಎಚ್ಚರಿಸಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X