•  

ಉಪ-ಚುನಾವಣೆ ನಿಷೇಧಿಸಬೇಕೆ?

ಮಂಗಳವಾರ, ಮಾರ್ಚ್ 31, 2009, 15:30 [IST]
Election Commission of India
ಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.

ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ ಪ್ರಶ್ನೆಗೆ ತಾನೇ ಉತ್ತರ ಹೊಳೆಯುತ್ತದೆ.

ಅಸಲಿಗೆ, ಉಪ-ಚುನಾವಣೆಗಳು ಯಾರಿಗೂ ಬೇಕಾಗಿರುವುದಿಲ್ಲ. ಆದರೆ, ನಡೆಸದೆ ಗತ್ಯಂತರವಿಲ್ಲ ಎಂಬ ಪರಿಸ್ಥಿತಿ ಭಾರತದಲ್ಲಿ ನಿರ್ಮಾಣವಾಗಿದೆ. ಚುನಾವಣಾ ಪ್ರಕ್ರಿಯೆ ಆಯೋಗಕ್ಕೆ ಭಾರೀ ಖರ್ಚಿನ ಬಾಬತ್ತು. ಮತದಾರ ಮತ್ತೆ ಸಾಲಲ್ಲಿ ನಿಂತು ಮತ ನೀಡುವ ಪ್ರಮೇಯ. ರಾಜಕಾರಣಿಗಳಿಗೆ ಮತ್ತೆ ಮತ್ತೆ ಮತದಾರನ ಮುಂದೆ ಕೈಯೊಡ್ಡುವ ಅಪಸವ್ಯ. ಇವಕ್ಕೆಲ್ಲ ಕೊನೆ ಹಾಡಬೇಕೆಂದರೆ ಉಪ-ಚುನಾವಣೆಗಳನ್ನು ನಿಷೇಧಿಸಲೇಬೇಕು.
  Read:  In English 
ಮೊತ್ತಮೊದಲ ಮಹಾಚುನಾವಣೆಯಲ್ಲಿ ಎಲ್ಲ ಸೇರಿ ಅಂದಾಜು 10 ಕೋಟಿ ರು. ಖರ್ಚಾಗಿತ್ತು. 15ನೇ ಲೋಕಸಭೆ ಚುನಾವಣೆಯಲ್ಲಿ ಅದರ ಪ್ರಮಾಣ 10 ಸಾವಿರ ಕೋಟಿ ರು.ಗೆ ಬಂದು ತಲುಪಿದೆ. ಇದರಲ್ಲಿ ಚುನಾವಣಾ ಆಯೋಗದಿಂದ ಶೇ.15ರಷ್ಟು ಮಾತ್ರ ಖರ್ಚಾಗುತ್ತದೆ. ಉಳಿದದ್ದು, ಪ್ರಚಾರಕ್ಕೆ. ಕರ್ನಾಟಕದಲ್ಲಿ ಕಳೆದ ಡಿಸೆಂಬರಲ್ಲಿ 8 ಕ್ಷೇತ್ರಗಳಿಗೆ ನಡೆದ ಉಪ-ಚುನಾವಣೆಯಲ್ಲಿ ಒಬ್ಬೊಬ್ಬ ಅಭ್ಯರ್ಥಿಗೆ ಅಂದಾಜು 25 ಕೋಟಿ ರು. ಖರ್ಚಾಗಿದೆ ಎನ್ನಲಾಗಿದೆ.

ಉಪ-ಚುನಾವಣೆಗಳು ಏತಕ್ಕೆ ಬರುತ್ತವೆಂಬುದನ್ನು ಗಮನಿಸೋಣ. ಜನ ನೀಡಿದ ಮತಗಳ ಸಹಾಯದಿಂದ ಆಯ್ಕೆಯಾದ ಶಾಸಕ 'ಆಪರೇಷನ್ನಿಗೆ' ಒಳಗಾಗಿ ಇನ್ನಾವುದೋ ಪಕ್ಷ ಸೇರಿದರೆ ಅಲ್ಲೊಂದು ಉಪ-ಚುನಾವಣೆ. ಪ್ರತಿನಿಧಿ ಸತ್ತರೆ ಉಪ-ಚುನಾವಣೆ. ಎರಡೆರಡು ಕ್ಷೇತ್ರಗಳಲ್ಲಿ ನಿಂತು ಒಂದರಲ್ಲಿ ಗೆದ್ದು ಇನ್ನೊಂದಕ್ಕೆ ತರ್ಪಣ ಬಿಟ್ಟರೆ ಉಪ-ಚುನಾವಣೆ. ಕೆಲ ವಿಧಾನಸಭೆ ಸದಸ್ಯರೂ ಲೋಕಸಭೆ ಚುನಾವಣೆಗೆ ನಿಲ್ಲುತ್ತಾರೆ. ಅಲ್ಲಿ ಗೆದ್ದರೆ ಇದನ್ನು ತ್ಯಜಿಸಬೇಕಾಗುತ್ತದೆ, ಆಗ ಮತ್ತೊಂದು ಉಪ-ಚುನಾವಣೆ.

ಇದೆಲ್ಲದರ ಬದಲಾಗಿ, ಗೆದ್ದ ಶಾಸಕ ಪಕ್ಷಾಂತರ ಮಾಡಿದರೆ, ಆ ಕ್ಷೇತ್ರದಲ್ಲಿ ಎರಡನೆಯ ಸ್ಥಾನದಲ್ಲಿದ್ದ ಅಭ್ಯರ್ಥಿಯನ್ನು ವಿಜಯಿಶಾಲಿಯನ್ನಾಗಿಸಬೇಕು. ಕಳೆದ ಉಪ-ಚುನಾವಣೆಯನ್ನೇ ಗಮನಿಸಿದರೆ, ಒಂದು ಕ್ಷೇತ್ರದ ಹೊರತಾಗಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಉಪ-ಚುನಾವಣೆ ಉದ್ಭವಿಸಿದ್ದು 'ಆಪರೇಷನ್ ಕಮಲ'ದಿಂದಾಗಿ. ಆಗ, ಮೊದಲನೆಯವರಾಗಿ ಸೋತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದರೆ ಉಪ-ಚುನಾವಣೆಯ ಪ್ರಮೇಯವೇ ಉದ್ಭವಿಸುತ್ತಿರಲಿಲ್ಲ. ಈ ನಿಟ್ಟಿನಲ್ಲಿ, ಪಕ್ಷಾಂತರ ಕಾಯ್ದೆಯನ್ನು ಇನ್ನಷ್ಟು ಬಿಗಿಯಾಗಿಸುವ ಅವಶ್ಯಕತೆಯಿದೆ. ಎರಡೆರಡು ಕ್ಷೇತ್ರಗಳಲ್ಲಿ ಚುನಾವಣೆಗೆ ನಿಲ್ಲಲು ಅವಕಾಶವನ್ನೂ ನೀಡಬಾರದು. ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ಚಿಂತಿಸುವ ಮತ್ತು ಕಾರ್ಯಪ್ರವೃತ್ತರಾಗಬೇಕಾದ ಅಗತ್ಯವಿದೆ.
User Comments
ಪ್ರಜೆ 01 Apr 2009 07:02 pm
ಉಪಚುನಾವಣೆ ಬೇಡ ಅಂತಾದ್ರೆ ಪಕ್ಷದಿಂದ ಪಕ್ಷಕ್ಕೆ ಹಾರುವ ಕಾಪಿಗಳನ್ನು ಹಿಡಿದು ತದೆಯೋದ್ದಬೇಕು.
ಗುಂಡ 01 Apr 2009 01:48 am
ಅದೇ ಮಾಡ್ತಾರಲ್ಲ ಸೌಂದರ್ಯವತಿ ಸ್ಪರ್ಧೇಲಿ .. ವಿನ್ನರ್ ಇಲ್ಲ ಅಂದ್ರೆ .. ರನ್ನರ್ ರೇ ವಿನ್ನರ್ರು ಅಂತ .. ರಾಜಕಾರಣ ಅನ್ನೋದು ಅಸ್ಟೊಂದು ಸುಲಭ ಅಲ್ಲ ಕಣಪ್ಪ . ನಿನ್ ಪ್ರಕಾರ ಗೆದ್ದೊನು ೮೦% ವೋಟು ತಗೊಂದಿದ್ರ್ರೋ.. ೨೦% ವೋಟು ತಕಂದೊವ್ನು ನೆಕ್ಷ್ತ ಶಾಸಕ ಅಂತ .. ಇದ್ ಯಾವ ಸೀಮೆ ಲೆಕ್ಕಾಚಾರ ? ಅದರ ಬದಲು .. ಒಂದುಸಲ ಚುನಾವಣಾ ಯಲ್ಲಿ ಆರಿಸಿ ಬಂದಮೇಲೆ .. ಪಕ್ಷಾಂತರ ಮಾಡುವಂತಿಲ್ಲ ! ಬೇಕಾದರೆ .. ಪಕ್ಷ ಬಿಟ್ಟು ಸ್ವಾತಂತ್ರಾಗಿ ಯಾರನ್ನು ಬೇಕಾದರೂ ಬೆಂಬಲಿಸಬಹುದು .. ಅಂತ ಮಾಡಿ.. ಎಂಮೆಲೀ ಕಪಿ ತರ ಅಡಿದರೀ ಮುಂದಿನಸಲ ಬುದ್ದಿ ಕಳಿಸಿ .. ಸೋಲಿಸಿ ತೋರಿಸಿ .. ಅದೇ ಮಾಡ್ತಾ ಇದಿರಲ್ಲ .. ಬಂಗಾರನ್ನು .. ಪೂಜರಿನೂ .. ದರುಮನ್ನು .. ಪದೇ ಪದೇ ಗೆಲ್ಲಿಸಿ ! ಕೆಳ್ರುಳ .. ಈ ನನ್ಮಕ್ಕಳು ಓಟು ಕೇಳಲು ಬಂದಾಗ .. ಏನ್ ಕೊಸ್ದಿದ್ದಿರ ಅಂತ ? ಅದು ಬುಟ್ಟು ಚುನಾವಣಾ ನಿಲ್ಲಿಸಿ ಅಂದ್ರೆ ಯಾವ ಲೆಕ್ಕಾಚಾರ ? ಅದೇ ಹೇಳ್ತಾರಲ್ಲ "ಊರ್ಗಂಗಿ ಸ್ಯಾಲೆ ಕಳ್ಕೊಂದ್ರು" ಅಂತ
[ ಅಭಿಪ್ರಾಯ ಬರೆಯಿರಿ ]
1st Test , Lord's Cricket Ground, St John's Wood
West Indies: 126 / 4, 49.6 Overs
IPL, Himachal Pradesh Cricket Association Stadium, Dharmasala
Kings XI Punjab won by 6 wickets
Follow Oneindia Kannada on Twitter
Oneindia Kannada Facebook fan page
Write Comments on this Article