
ರಾಂಚಿ, ನ. 30 : ಬಹುಕೋಟಿ ಹವಾಲಾ ಹಗರಣದ ಪ್ರಮುಖ ಆರೋಪಿಯಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರನ್ನು ವಿಚಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ. ಸಿಂಗಬೂಮ್ ಕ್ಷೇತ್ರದ ಸಂಸದರಾಗಿರುವ ಮಧು ಕೋಡಾ ಅವರು ಸ್ವಗ್ರಾಮ ಚೈಬಾಸಾದಲ್ಲಿರುವ ನಿವಾಸಕ್ಕೆ ತೆರಳಿದ ಎಸ್ಪಿ ಅಖಿಲೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಮಾಜಿ ಸಿಎಂನನ್ನು ಬಂಧಿಸಿ ರಾಂಚಿಗೆ ಕರೆದೊಯ್ದಿದೆ.
ಮಧು ಕೋಡಾ ಅವರು ಬಹುಕೋಟಿ ಹವಾಲಾ ಹಗರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪಡೆ ವಿಚಾರಣೆಗೆ ಹಾಜರಾಗುವಂತೆ ನೀಡಿದ ಸೂಚನೆಗೆ ಸೂಕ್ತವಾಗಿ ಸ್ಪಂದಿಸದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ಮಿಶ್ರಾ ಹೇಳಿದ್ದಾರೆ. ಪೊಲೀಸ್ ವಿಶೇಷ ತಂಡ ಮಧು ಕೋಡಾ ಅವರಿಗೆ ನವೆಂಬರ್ 11, 15 ಮತ್ತು 19 ಮೂರು ನೋಟಿಸ್ ಗಳನ್ನು ನೀಡಿತ್ತು. ಆದರೆ, ಕೋಡಾ ವಿಚಾರಣೆಗೆ ಹಾಜರಾಗಿರಲಿಲ್ಲ.
ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು, ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿ 23 ತಿಂಗಳು ಅಧಿಕಾರದಲ್ಲಿದ್ದ 39 ವರ್ಷದ ಮಧು ಕೋಡಾ, ಈ ಅವಧಿಯಲ್ಲಿ ಸುಮಾರು 5,500 ಕೋಟಿ ರುಪಾಯಿಗಳ ಅವ್ಯವಹಾರ ನಡೆಸಿದ್ದಾರೆ. ಇತ್ತೀಚೆಗೆ ಅವರು ಜಾರ್ಖಂಡ್ ನವನಿರ್ಮಾಣ ಮೋರ್ಚಾ ಎಂಬ ನೂತನ ಪಕ್ಷವನ್ನು ಹುಟ್ಟು ಹಾಕಿದ್ದರು.
(ಏಜನ್ಸೀಸ್)
ಮಧು ಕೋಡಾ ಅವರು ಬಹುಕೋಟಿ ಹವಾಲಾ ಹಗರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪಡೆ ವಿಚಾರಣೆಗೆ ಹಾಜರಾಗುವಂತೆ ನೀಡಿದ ಸೂಚನೆಗೆ ಸೂಕ್ತವಾಗಿ ಸ್ಪಂದಿಸದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ಮಿಶ್ರಾ ಹೇಳಿದ್ದಾರೆ. ಪೊಲೀಸ್ ವಿಶೇಷ ತಂಡ ಮಧು ಕೋಡಾ ಅವರಿಗೆ ನವೆಂಬರ್ 11, 15 ಮತ್ತು 19 ಮೂರು ನೋಟಿಸ್ ಗಳನ್ನು ನೀಡಿತ್ತು. ಆದರೆ, ಕೋಡಾ ವಿಚಾರಣೆಗೆ ಹಾಜರಾಗಿರಲಿಲ್ಲ.
ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು, ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿ 23 ತಿಂಗಳು ಅಧಿಕಾರದಲ್ಲಿದ್ದ 39 ವರ್ಷದ ಮಧು ಕೋಡಾ, ಈ ಅವಧಿಯಲ್ಲಿ ಸುಮಾರು 5,500 ಕೋಟಿ ರುಪಾಯಿಗಳ ಅವ್ಯವಹಾರ ನಡೆಸಿದ್ದಾರೆ. ಇತ್ತೀಚೆಗೆ ಅವರು ಜಾರ್ಖಂಡ್ ನವನಿರ್ಮಾಣ ಮೋರ್ಚಾ ಎಂಬ ನೂತನ ಪಕ್ಷವನ್ನು ಹುಟ್ಟು ಹಾಕಿದ್ದರು.
(ಏಜನ್ಸೀಸ್)





















