•  

ಇಂಗ್ಲಿಷ್ ಪತ್ರಿಕೆಗಳಿಂದ ರಾಜ್ಯಕ್ಕೆ ದ್ರೋಹ

ಬುಧವಾರ, ಫೆಬ್ರವರಿ 3, 2010, 11:36 [IST]
TOI Ahmedabad
ಕಳೆದ ಕೆಲದಿನಗಳು ಹಜೀರಾ ಸೂರತ್ (ಗುಜರಾತ್)ನಲ್ಲಿ ಇದ್ದೆ. ಹೋಟಲ್ ರೂಮಿನಲ್ಲಿ "ಟೈಮ್ಸ್ ಆಫ್ ಇಂಡಿಯಾ" ಅಹಮದಾಬಾದ್ ಸೂರತ್ ಆವೃತ್ತಿಯ ಪತ್ರಿಕೆ ಸಿಗ್ತಿತ್ತು. ಟೈಮ್ಸ್ ಆಫ್ ಇಂಡಿಯಾದ ಈ ಆವೃತ್ತಿಯನ್ನು ಪ್ರತಿದಿನ ತಿರುವಿ ಹಾಕುವಾಗ ಗಮನಕ್ಕೆ ಬಂದದ್ದು ಗುಜರಾತಿಗಳಿಗೆ ಸಂಬಂಧಿಸಿದ ಸುದ್ದಿಗಳಿಗೆ ಇವರು ಕೊಡುತ್ತಿದ್ದ ಪ್ರಾಮುಖ್ಯತೆ! ಇಲ್ಲಿ ಲಗತ್ತಿಸಿರುವ ಮುಖಪುಟದ ಕೆಲವು ಅಗ್ರ ಸುದ್ದಿಗಳನ್ನು (Lead News)ಗಮನಿಸಿ.

ಯಾವುದೇ ರಾಜ್ಯದ ಯಾವುದೇ ಮಾಧ್ಯಮಗಳು ಅಲ್ಲಿನ ಸ್ಥಳೀಯ ಸುದ್ದಿಗಳಿಗೆ, ಅಲ್ಲಿನ ಒಳಿತನ್ನು ಬಿಂಬಿಸುವುದಕ್ಕೆ, ಅವರಿಗಾದ ಅನ್ಯಾಯದ ಪ್ರತಿಭಟನೆಗೆ ವೇದಿಕೆ ಒದಗಿಸುವುದಕ್ಕೆ ಒಟ್ಟಾರೆ ಆ ರಾಜ್ಯದ ಆಗುಹೋಗುಗಳಿಗೆ ಸ್ಪಂದಿಸಿ ಬದ್ಧವಾಗಿರಬೇಕಾದದ್ದು ಸಹಜವಾದದ್ದೆ.

ಆದರೆ ಇದಕ್ಕೆ ವಿರುದ್ಧವಾಗಿರುವುದು ನಮ್ಮ ಕರ್ನಾಟಕದ ಇಂಗ್ಲೀಷ್ ಮಾಧ್ಯಮಗಳು. "ಅಪ್ಪಟ ಪ್ರತಿಭೆಗಳಾದ ವಿನಯ್ ಕುಮಾರ್ ಮತ್ತು ಮನೀಷ್ ಪಾಂಡೆ ಯಾಕೆ ಹೊರಗುಳಿದರು", "ವಿಜಯನಗರದ ಕೃಷ್ಣದೇವರಾಯರ 500 ನೇ ವರ್ಷಾಚರಣೆ" ಹೀಗೆ ಕರ್ನಾಟಕದ ಯಾವುದೇ ಪ್ರಮುಖ ವಿಷಯಗಳು "ಯಾವುದೇ ಟೈಮ್ಸ್ " ನಲ್ಲಿ ಮುಖಪುಟದ ಸುದ್ಧಿಯಾಗಲಿಲ್ಲ.

ಆದರೆ ಕೃಷ್ಣದೇವರಾಯ ಕುರಿತಾದ ಬಣ್ಣ ಬಣ್ಣದ "ಜಾಹೀರಾತು" ಮಾತ್ರ ಈ ಪತ್ರಿಕೆಗಳಲ್ಲಿ ಕಂಡು ಬಂದದ್ದು ಸತ್ಯ!ಬೆಂಗಳೂರಿನ ಇಂಗ್ಲೀಷ್ ಪತ್ರಿಕೆಗಳಿಗೂ ಕನ್ನಡಕ್ಕೂ ಒಂದು ರೀತಿಯ ಎಣ್ಣೆ ಸಿಗೇಕಾಯಿ ಬಾಂಧವ್ಯವೆ! ಬೆಂಗಳೂರಿನಲ್ಲಿ ಕನ್ನಡ ಮಾತ್ರ ಏಕಿದೆ? ಬೆಂಗಳೂರಿನಲ್ಲಿ ಕನ್ನಡಿಗರಿರುವುದೇ ಶೇಕಡ 30 ಮಂದಿ, ವಲಸಿಗರು ಕನ್ನಡ ಕಲಿಯಬೇಕಾದ ಅವಶ್ಯಕತೆಯಿಲ್ಲ ಎಂಬ ಸುದ್ಧಿಗಳಿಗೆ ಪ್ರಚಾರ ನೀಡುವುದಕ್ಕೆ ಈ ಪತ್ರಿಕೆಗಳು ಮರೆಯುವುದಿಲ್ಲ.

ಇದು ಹೀಗ್ಯಾಕೆ ಎಂದು ನಮ್ಮ ಇಂಗ್ಲೀಷ್ ಮಾಧ್ಯಮದವರನ್ನು ವಿಚಾರಿಸಿ. "ಸಂಕುಚಿತರಾಗಬೇಡಿ" "ವಿಶ್ವ ಮಾನವರಾಗಿ" ಎಂದು ಬುದ್ಧಿವಾದ! ಸಿಗುವುದು ಗ್ಯಾರಂಟಿ. ಇವರ ಬುದ್ಧಿವಾದವನ್ನು ನಾವು ಒಪ್ಪಿಕೊಳ್ಳುವುದಾದರೆ ಗುಜರಾತ್ ನ ಇಂಗ್ಲೀಷ್ ಮಾಧ್ಯಮದವರು ಸಂಕುಚಿತರೆ?

User Comments
ರಾಜಶೇಖರ ಕೋಡಿಮಠ 04 Feb 2010 12:58 pm
ಇಷ್ಟೆಲ್ಲ ಮಾತಾಡುತ್ತಿರಲ್ಲ, ಕನ್ನಡ ಪತ್ರಿಕೆಯಲ್ಲಿ ಬರುವ ಸುದ್ದಿಗಳ ಅಹ್ರತೆ ಬಳಕೆ ಮತ್ತು ಯೋಗತ್ಯೆ ಬಗ್ಗೆ ಯಾರಾದರೂ ಯೋಚನೆ ಮಾಡಿದಿರಾ. ಬರದವರೇ ಬರೆಯುವುದು, ಕಾಂಜಿ ಪೀಂಜಿ ಸುದ್ದಿಗಳು ಬರುತ್ತವೆ. ಅಂಥ ಸುದ್ದಿಗಳು ಎಲ್ಲಾ ಕಡೆ ಸಿಗತ್ತೆ. ನಾವು ಸುದ್ದಿ ಮಾಹಿತಿ ಬಳಸುವುದರ ಮೂಲಕ ನಮ್ಮ ಬದುಕಿಗೆ ನೆರವಾಗುವಂಥ ಸುದ್ದಿ ಬೇಕು. ಅದಕ್ಕೆ ನಾನು ಹಿಂದೂ ಓದುವುದು. ಮಾಧ್ಯಮಿಕ ಶಾಲೆಯಿಂದ ನಿತ್ಯ ಕನ್ನಡ ಪತ್ರಿಕೆ ಓದುತ್ತಾ ಬಂದಿದ್ದೇನೆ. ಅದನ್ನು ತಪ್ಪಿಸುವುದಿಲ್ಲ ಎನ್ನುವುದು ಬೇರೆ ವಿಷಯ
ಉಪಾಯ 04 Feb 2010 12:33 pm
ನಾವು ಇಂಗ್ಲಿಷ್ ಪೇಪರ್ ತಗೊಳ್ಳೋದು ನಿಲ್ಲಿಸಿ ೧ ವರ್ಷ ಆಯ್ತು
[ ಅಭಿಪ್ರಾಯ ಬರೆಯಿರಿ ]
1st Test , Lord's Cricket Ground, St John's Wood
England won by 5 wickets
Follow Oneindia Kannada on Twitter
Oneindia Kannada Facebook fan page
Write Comments on this Article